Advertisement

Raichur; ಒಳ ಮೀಸಲಾತಿಗಾಗಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ

02:11 PM Oct 16, 2024 | Team Udayavani |

ರಾಯಚೂರು: ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಜಾರಿ ಮಾಡುವವರೆಗೂ ಯಾವುದೇ ರೀತಿಯ ಹುದ್ದೆಗಳ ಭರ್ತಿ ಮಾಡಬಾರದು ಎಂದು ಆಗ್ರಹಿಸಿ ಎಸ್ಸಿ ಒಳ ಮೀಸಲಾತಿ ಜಾರಿ ಐಕ್ಯ ಹೋರಾಟ ಸಮಿತಿಯಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಬೆಳಗ್ಗೆ ಡಿಸಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಡಿಸಿ ಕಚೇರಿಗೆ ಮುನ್ನುಗ್ಗುಲು ಮುಂದಾದರು. ಪೊಲೀಸರು ಪ್ರತಿಭಟನಾಕಾರರನ್ನು ತಡೆದರು. ಡಿಸಿಯವರು ಸ್ಥಳಕ್ಕೆ ಬರಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ಆದರೆ, ಡಿಸಿಯವರು ಸ್ಥಳ ಪರಿಶೀಲನೆಗೆ ಸಿಂಧನೂರಿಗೆ ತೆರಳಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದರೂ ಪ್ರತಿಭಟನಾಕಾರರು ಪಟ್ಟು ಹಿಡಿದರು.

ಒಳ ಮೀಸಲಾತಿ ಜಾರಿ ಕುರಿತು ಮೂರು ದಶಕಗಳ ಹೋರಾಟವು ಕೊನೆ ಹಂತಕ್ಕೆ ಬಂದು ತಲುಪಿದೆ, ಸುಪ್ರೀಂ ಕೋರ್ಟ್‌ ಸಹ ಸರ್ಕಾರಕ್ಕೆ ಸೂಕ್ತ ಆದೇಶ ನೀಡಿದೆ. ಆದರೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ಧೋರಣೆ ಮುಂದುವರೆಸಿದೆ. ಈಚೆಗೆ ಜಿಲ್ಲೆಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರು ಒಳ ಮೀಸಲಾತಿ ಜಾರಿ ಕುರಿತು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗುವುದು. ಅಲ್ಲಿವರೆಗೂ ಯಾವುದೇ ಹುದ್ದೆಗಳ ಭರ್ತಿಗೆ ಮುಂದಾಗುವುದಿಲ್ಲ ಎಂದಿದ್ದರು. ಈಗ 34,600 ಹುದ್ದೆಗಳ ಭರ್ತಿಗೆ ಮುಂದಾಗಿರುವುದು ಖಂಡನೀಯ. ಇದು ದಲಿತ ಹಾಗೂ ಶೋಷಿತ ಸಮುದಾಯಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರು ಹೊಂದಿರುವ ಬೆಜವಾಬ್ದಾರಿತಕ್ಕೆ ಸಾಕ್ಷಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು. ಕೊನೆಗೆ ಪ್ರತಿಭಟನಾಕಾರರನ್ನು ಬಂಧಿಸಿ ಸಾರಿಗೆ ಬಸ್ ಹಾಗು ಪೊಲೀಸ್ ವ್ಯಾನ್ ನಲ್ಲಿ ಬಂಧಿಸಿ ಕರೆದೊಯ್ಯಲಾಯಿತು. ಒಳ ಮೀಸಲಾತಿ ಬೇಡಿಕೆ ಮುಂದಿಟ್ಟುಕೊಂಡು ಈಚೆಗೆ ರಾಯಚೂರು ಬಂದ್‌ ನಡೆಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next