Advertisement

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

03:05 PM Apr 15, 2024 | Team Udayavani |

ರಾಯಚೂರು: ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಸೋಮವಾರ ಬೀ ಫಾರಂ ಸಮೇತ‌ ನಾಮಪತ್ರ ಸಲ್ಲಿಸಿದರು.

Advertisement

ಬೆಳಗ್ಗೆ ಜಿಲ್ಲಾ ಚುನಾವಣಾಧಿಕಾರಿ ಎಲ್.ಚಂದ್ರಶೇಖರ ನಾಯಕರಿಗೆ ನಾಮಪತ್ರ ಸಲ್ಲಿಸಿದರು. ಬಳಿಕ ಮಾತನಾಡಿ, ಇಂದು ಸೋಮವಾರ ಮನೆದೇವರು ಗುರುಗುಂಟಾ ಅಮರೇಶ್ವರರ ದಿನವಾಗಿದೆ. ಹೀಗಾಗಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದೇನೆ. ಏ.18ರಂದು ಪಕ್ಷದ ಕಾರ್ಯಕರ್ತರು, ರಾಯಚೂರು ಯಾದಗಿರಿ ಜಿಲ್ಲೆಯ ಮುಖಂಡರು ಜತೆಗೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಾಗುವುದು ಎಂದರು.

ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕ ನಾಯಕರನ್ನು ಭೇಟಿ ಮಾತನಾಡಿದ್ದು, ಮೊದಲ ಹಂತದ ಚುನಾವಣೆಯಲ್ಲಿ ಬ್ಯುಸಿಯಾಗಿದ್ದೇವೆ. ಖಂಡಿತ ಈ ಭಾಗಕ್ಕೆ ಬಂದು ಪ್ರಚಾರ ಮಾಡುವುದಾಗಿ ತಿಳಿಸಿದ್ದಾರೆ. ಕೆಆರ್ ಪಿ ಪಕ್ಷದ ಗಾಲಿ ಜನಾರ್ದ ರೆಡ್ಡಿ ಕೂಡ ಪ್ರಚಾರಕ್ಕೆ ಬರುವ ಭರವಸೆ ನೀಡಿದ್ದಾರೆ. ಏ.18ರಂದು ಇನ್ನೂ ಮೂರು ಪ್ರತಿ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು.

ಸೂಚಕ  ಹಲ್ಲಪ್ಪ, ವಕೀಲ ರಾಘವೇಂದ್ರ ಚೂಡಾಮಣಿ, ಪುತ್ರ ರಾಜಾ ನಹುಷಾ ವರ್ಷ, ಸುಧೀರ್ ರಂಜನ್ ಕಸ್ಬೆ ಜತೆಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next