Advertisement

ರಾಯಚೂರು: ಮಾಜಿ ಸಚಿವ ಸುಧೀಂದ್ರ ರಾವ್‌ ಕಸಬೆ ನಿಧನ

10:25 PM Oct 23, 2022 | Team Udayavani |

ರಾಯಚೂರು: ಕಲ್ಮಲಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿ, ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಸುಧೀಂದ್ರ ರಾವ್‌ ಕಸಬೆ ಅವರು ಶನಿವಾರ ರಾತ್ರಿ ಗಿಲ್ಲೆಸುಗೂರಿನ ತಮ್ಮ ನಿವಾಸದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Advertisement

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು 1978ರಲ್ಲಿ ಜಿಲ್ಲೆಯ ಕಲ್ಮಲಾ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದರು. 1980ರಲ್ಲಿ ಗುಂಡೂರಾವ್‌ ಸಂಪುಟದಲ್ಲಿ ಮುಜರಾಯಿ ಮತ್ತು ಕೃಷಿ ಮಾರುಕಟ್ಟೆ ಖಾತೆ ಸಚಿವರಾಗಿದ್ದರು. 1983ರಲ್ಲಿ ಕಲ್ಮಲಾ ಕ್ಷೇತ್ರದಿಂದ ಪುನರಾಯ್ಕೆಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next