Advertisement

Raichur; ಮಿರ್ಜಾಪುರದಲ್ಲಿ ಗುಂಪು ಘರ್ಷಣೆ: ವ್ಯಕ್ತಿ ಸಾವು

12:54 PM Sep 15, 2024 | Team Udayavani |

ರಾಯಚೂರು: ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆಯಾಗಿದ್ದು, ಓರ್ವ ವ್ಯಕ್ತಿ ಮೃತಪಟ್ಟ ಘಟನೆ ತಾಲೂಕಿನ ಮಿರ್ಜಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.

Advertisement

ಭೀಮೇಶ್ ನಾಯಕ್ (38 ವ) ಮೃತಪಟ್ಟಿದ್ದು, ರಾಮಲಮ್ಮ, ಅಲಾರಿ ನಾಯಕ್, ದೂಳಯ್ಯ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಕಟ್ಟಿಗೆ, ಕುಡುಗೋಲು, ಭರ್ಜಿಗಳಿಂದ ಪರಸ್ಪರ ಹಲ್ಲೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನೊಂದು ಗುಂಪಿನಲ್ಲಿ ಯರ್ರಣ್ಣ, ದೊಳ್ಳಯ್ಯ, ದೇವಪ್ಪ, ಮಾದಗಾನು, ಗೊರಿಯಾನು, ವಿರೇಶ್, ತಾಯಪ್ಪ, ಕೃಷ್ಣಗಾರು ಎಂಬುವವರು ದಾಳಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯಿಂದ ಗ್ರಾಮದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದೆ.

ಘರ್ಷಣೆಯಿಂದ ವೃದ್ಧರು ಸೇರಿದಂತೆ ಬಹುತೇಕರಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಎಸ್ ಪಿ ಪುಟ್ಡಮಾದಯ್ಯ ಸೇರಿದಂತೆ ಇಡಪನೂರು ಪೊಲೀಸರು ತೆರಳಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಈ ಕುರಿತು ಇಡಪನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next