Advertisement

Raichur; ಹೆದ್ದಾರಿಯಲ್ಲಿಇಷ್ಟಲಿಂಗ ಪೂಜೆ ಹೋರಾಟ

03:15 PM Dec 24, 2023 | Team Udayavani |

ರಾಯಚೂರು: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಕೂಡಲಸಂಗಮ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಲಿಂಗಸುಗೂರು ತಾಲ್ಲೂಕಿನ ಯರಡೋಣ ಕ್ರಾಸ್ ಹತ್ತಿರ ಹೆದ್ದಾರಿಯ ಮೇಲೆ ಇಷ್ಟಲಿಂಗ ಪೂಜೆ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಯಿತು.

Advertisement

ಸ್ವಾಮೀಜಿ ನೇತೃತ್ವದಲ್ಲಿ ನೂರಾರು ಜನ ರಸ್ತೆಯ ಮೇಲೆಯೇ ಇಷ್ಟಲಿಂಗ ಪೂಜೆ ಮಾಡಿಕೊಂಡರು. ಇದರಿಂದ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದ್ದು, ಪ್ರಯಾಣಿಕರು ಪರದಾಡುವಂತಾಯಿತು.

ಸರ್ಕಾರ ಕೂಡಲೇ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೊಡಬೇಕು. ಹಂತ ಹಂತವಾಗಿ ಎಲ್ಲ ಜಿಲ್ಲೆಗಳಲ್ಲಿ ಇಷ್ಟಲಿಂಗ ಪೂಜೆ ನಡೆಸುವ ಮೂಲಕ ಹೋರಾಟ ನಡೆಸಿ ಹಕ್ಕೊತ್ತಾಯ ಮಾಡುವುದಾಗಿ ಶ್ರೀಗಳು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next