Advertisement

Raichur; 371ಜೆ ವಿಶೇಷ ಸ್ಥಾನಮಾನದ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

12:55 PM Jun 15, 2024 | Team Udayavani |

ರಾಯಚೂರು: ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಿರುವ 371 ಜೆ ವಿಶೇಷ ಸ್ಥಾನಮಾನದ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ಪಕ್ಷಾತೀತವಾಗಿ ನಡೆಯುತ್ತಿರುವ ಹೋರಾಟದಲ್ಲಿ ಸಹಸ್ರಾರು ಜನ ಭಾಗಿಯಾಗಿದ್ದಾರೆ.

Advertisement

ಮೀಸಲಾತಿ ವಿಚಾರದಲ್ಲಿ ಗೊಂದಲ ಸೃಷ್ಟಿಸುತ್ತಿರುವ ನಾಯಕರ ಹೇಳಿಕೆಗೆ ಜನಾಕ್ರೋಶ ಭುಗಿಲೆದ್ದಿದ್ದು, ವಿವಿಧ ಸಂಘಟನೆಗಳು, ಶಾಲಾ ಕಾಲೇಜುಗಳಿಂದ ಆಕ್ರೋಶ ವ್ಯಕ್ತವಾಗಿದೆ.

ನಗರದ ಡಾ.ಬಿ.ಆರ್.ವೃತ್ತದಲ್ಲಿ ಜಮಾಯಿಸಿದ ಹೋರಾಟಗಾರರು, 371 ಜೆ ವಿರೋಧಿಸಿ ಬೆಂಗಳೂರಿನ ಹಸಿರು ಪ್ರತಿಷ್ಠಾನ ನಡೆಸುತ್ತಿರುವ ಹೋರಾಟಕ್ಕೆ ಖಂಡಿಸಿದರು.

ಮೀಸಲಾತಿ ಸಿಕ್ಕು 11 ವರ್ಷ ಕಳೆದರೂ ನೇಮಕಾತಿಯಲ್ಲಿ ಅವಕಾಶ ಸಿಕ್ಕಿಲ್ಲ, ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ವಿಶೇಷ ಸ್ಥಾನಮಾನ ಅತ್ಯಗತ್ಯ ಎಂದು ಪ್ರತಿಭಟನಾಕಾರರು ಬೆಳಗ್ಗೆ 10 ಗಂಟೆಯಿಂದ ಬಿಸಿಲಲ್ಲೇ ಹೋರಾಟ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next