Advertisement

Raichur; ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲೇ ಧರಣಿ

11:44 AM Nov 11, 2023 | Team Udayavani |

ರಾಯಚೂರು: ರಾಜ್ಯ ಸರ್ಕಾರದಿಂದಲೇ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಿಸುತ್ತಿದ್ದರೂ ಶಿಷ್ಟಾಚಾರದ ಪ್ರಕಾರ ಯಾವುದೇ ಅಧಿಕಾರಿಗಳು ಕಾರ್ಯಕ್ರಮಕ್ಕೆ ಬಾರದ ಹಿನ್ನೆಲೆಯಲ್ಲಿ ದಲಿತ ಮುಖಂಡರು ಸ್ಥಳದಲ್ಲೇ ಧರಣಿ ನಡೆಸಿದರು.

Advertisement

ನಗರದ ಕನ್ನಡ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ‌. ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಸಚಿವರಾದಿಯಾಗಿ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಹೆಸರು ಹಾಕಲಾಗಿತ್ತು. ಆದರೆ, ಕಾರ್ಯಕ್ರಮದ ಸಮಯ ಮೀರಿದರೂ ಯಾವೊಬ್ಬ ಜನಪ್ರತಿನಿಧಿಗಳು ಅಧಿಕಾರಿಗಳು ಕಾರ್ಯಕ್ರಮಕ್ಕೆ ಆಗಮಿಸಲಿಲ್ಲ. ಇದರಿಂದ ದಲಿತ ಸಮಾಜದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಡಳಿತ, ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು.

ಅಧಿಕಾರಿಗಳು ಕಾಟಾಚಾರಕ್ಕೆ ಕಾರ್ಯಕ್ರಮ ನಡೆಸುತ್ತಿದ್ದಾರೆ. ಸರ್ಕಾರದ ಆದೇಶ ಇದ್ದರೂ ಪಾಲಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೊನೆಗೆ ಅಪರ ಜಿಲ್ಲಾಧಿಕಾರಿ ಕಾರ್ಯಕ್ರಮ ಬರುವುದಾಗಿ ಕರೆ ಮೂಲಕ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next