Advertisement

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

12:10 PM Apr 27, 2024 | Team Udayavani |

ರಾಯಚೂರು: ನಗರದ ಗಾಂಧಿ ವೃತ್ತದಲ್ಲಿರುವ ಜೀರ್ಣೊದ್ಧಾರಗೊಂಡ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಪತ್ನಿ ಪ್ರಿಯಾ ಜತೆ ಭೇಟಿ ನೀಡಿರುವ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ವಿಶೇಷ‌ ಪೂಜೆ ಸಲ್ಲಿಸಿದರು.

Advertisement

ಜೀರ್ಣೋದ್ಧಾರಗೊಂಡ ಈ ದೇವಸ್ಥಾನವನ್ನು ಈಚೆಗೆ ನಡೆದ ಹನುಮ ಜಯಂತಿಯನ್ನು ಲೋಕಾರ್ಪಣೆ‌ ಮಾಡಲಾಗಿತ್ತು. ಕಳೆದ ಕೆಲ ವರ್ಷಗಳ ಹಿಂದೆಯೂ ಈ ದೇವಸ್ಥಾನಕ್ಕೆ ಸುದೀಪ್ ಈ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದೇವಸ್ಥಾನ ಉದ್ಘಾಟನೆ ಹಿನ್ನೆಲೆಯಲ್ಲಿ ಮತ್ತೆ ಭೇಟಿ ನೀಡಿದ್ದಾರೆ ಎನ್ನಲಾಗುತ್ತಿದೆ. ಸುದೀಪ್ ದಂಪತಿಯಿಂದ ಹೋಮ, ಹವನ ವಿಶೇಷ ಪೂಜೆ ನಡೆಸಲಾಗುತ್ತಿದೆ. ಸುದೀಪ್ ರನ್ನು ನೋಡಲು ಜನ ದೇವಸ್ಥಾನ ಎದುರು ಬಿರು ಬಿಸಿಲಲ್ಲಿ ಜನ ಜಮಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next