Advertisement

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

12:42 PM May 04, 2024 | Team Udayavani |

ರಾಯಚೂರು: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರಿದ್ದ ವೇದಿಕೆಯಲ್ಲಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ನುಗ್ಗಿದ ಕಾರಣ ಪೊಲೀಸರು ಲಾಠಿ ಬೀಸಿದ ಘಟನೆ ರಾಯಚೂರಿನಲ್ಲಿ ನಡೆದಿದೆ.

Advertisement

ರಾಯಚೂರು- ಯಾದಗಿರಿ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಪರ ಮತಯಾಚನೆಗೆ ಅಣ್ಣಾಮಲೈ ಆಗಮಿಸಿದ್ದಾರೆ. ನಗರದ ಸಂತೋಷ್ ಹಬ್ ಹೊಟೆಲ್‌ನಲ್ಲಿ ನಡೆಯುತ್ತಿದ್ದ ಬಿಜೆಪಿ‌ ಕಾರ್ಯಕ್ರಮದ ಬಳಿಕ ಅಣ್ಣಾಮಲೈ ಅವರಿಗೆ ವೇದಿಕೆ ಮೇಲೆ ಹೂವಿನ ಹಾರ ಹಾಕಲು ನೂಕು ನುಗ್ಗಲು ಉಂಟಾಗಿದೆ.

ಕಾರ್ಯಕ್ರಮ ಮುಕ್ತಾಯದ ಬಳಿಕ ಕಾರ್ಯಕರ್ತರು ಅಣ್ಣಾಮಲೈ ಜೊತೆ ಸೆಲ್ಫಿ ತೆಗೆದುಕೊಳ್ಳಲು‌ ವೇದಿಕೆ ಮೇಲೆ ಮುಗಿಬಿದ್ದಿದ್ದಾರೆ. ಬಿಜೆಪಿ‌ ಕಾರ್ಯಕರ್ತರು ಹಾಗೂ ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.  ಕಾರ್ಯಕರ್ತರನ್ನ ಚದುರಿಸಲು ವೇದಿಕೆ ಮೇಲೆಯೇ ಪೊಲೀಸರು ಲಾಠಿ ಬೀಸಿದರು.

Advertisement

Udayavani is now on Telegram. Click here to join our channel and stay updated with the latest news.

Next