Advertisement

Raichur: ಚಿತ್ರಾನ್ನ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

02:40 PM Sep 24, 2024 | Team Udayavani |

ಅರಕೇರಾ: ತಾಲೂಕಿನ ಆಲ್ಕೋಡ ಗ್ರಾಮದ ವಸತಿ ನಿಲಯವೊಂದರಲ್ಲಿ ಸೆ.24ರ ಮಂಗಳವಾರ ಬೆಳಗಿನ ಉಪಾಹಾರ (ಚಿತ್ರಾನ್ನ) ಸೇವಿಸಿ 10 ಕ್ಕೂ ಹೆಚ್ಚು  ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ.

Advertisement

ಉಪಹಾರ ಸೇವಿಸಿದ ವಿದ್ಯಾರ್ಥಿಗಳು ತಲೆ ಸುತ್ತು, ವಾಂತಿ ಹಾಗೂ ಆಯಾಸಕ್ಕೆ ಒಳಗಾಗಿದ್ದು, ವಿದ್ಯಾರ್ಥಿಗಳನ್ನು ಅರಕೇರಾ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ. ಇದರಿಂದ ಗಾಬರಿಗೊಂಡ ವಿದ್ಯಾರ್ಥಿಗಳು ಶಿಕ್ಷಕರ ಗಮನಕ್ಕೆ ತಂದಿದ್ದು, ಶಿಕ್ಷಕರು ಅಸ್ವಸ್ಥರಾದ ವಿದ್ಯಾರ್ಥಿಗಳಿಗೆ ಒ.ಆರ್‌.ಎಸ್. ಕುಡಿಸಿದ್ದು, 5-6 ವಿದ್ಯಾರ್ಥಿಗಳು ಚೇತರಿಸಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ವೈದ್ಯ ರಾಘವೇಂದ್ರ ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಆಹಾರದಲ್ಲಿ ವ್ಯತ್ಯಾಸವಾಗಿದ್ದರಿಂದಾಗಿ ಈ ರೀತಿಯ ಸಮಸ್ಯೆ ಆಗಿರಬಹುದು ಎಂದು ತಿಳಿಸಿದ್ದಾರೆ.

ಮುಂಜಾಗ್ರತಾ ದೃಷ್ಟಿಯಿಂದ ಅಸ್ವಸ್ಥ ವಿದ್ಯಾರ್ಥಿಗಳನ್ನು ದೇವದುರ್ಗದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಲಾಗಿದೆ. ಘಟನೆ ಬಗ್ಗೆ ಸತ್ಯ ಸಂಗತಿ ಅರಿಯಲು ಇಲಾಖಾ ಮಟ್ಟದ ವಿಚಾರಣೆ ನಡೆಸಬೇಕು ಎಂದು ಪಾಲಕರು ಪಟ್ಟು ಹಿಡಿದಿದ್ದಾರೆ. ತಿಂಗಳ ಹಿಂದೆಯೇ ಮಧ್ಯಾಹ್ನದ ಊಟದಲ್ಲಿ ವಿಷ ಬೆರೆಸಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಆಘಾತ ಉಂಟಾಗಿದೆ. ಹಾಸ್ಟೆಲ್ ವಾರ್ಡನ್ ಹಾಗೂ ಶಾಲೆ ಮುಖ್ಯ ಶಿಕ್ಷಕರು ಉತ್ತರ ನೀಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next