Advertisement

Raichur; 2ನೇ ದಿನವೂ ಮುಂದುವರಿದ ಇಡಿ ಅಧಿಕಾರಿಗಳ ಶೋಧನಾ ಕಾರ್ಯ

02:47 PM Jul 11, 2024 | Team Udayavani |

ರಾಯಚೂರು: ಮಹರ್ಷಿ ವಾಲ್ಮೀಕಿ ನಿಗಮದಲ್ಲಿನ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಹಾಗೂ ಅವರ ಮಾಜಿ ಪಿಎ ಪಂಪಣ್ಣನವರ ಮನೆಯಲ್ಲಿ ಎರಡನೇ ದಿನವಾದ ಗುರುವಾರವೂ ಇಡಿ ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ.

Advertisement

ಬುಧವಾರ ನಗರದ ಎರಡು ಕಡೆ ರಾತ್ರಿ 11 ಗಂಟೆವರೆಗೆ ಶೋಧ ಕಾರ್ಯ ನಡೆಸಿದ್ದ ಇಡಿ ಅಧಿಕಾರಿಗಳು, ಗುರುವಾರ ಬೆಳಗ್ಗೆ 10 ಗಂಟೆಯಿಂದ ಶೋಧ ಕಾರ್ಯ ಆರಂಭಿಸಿದ್ದಾರೆ.

ಪಂಪಣ್ಣನವರ ವಿಚಾರಣೆ ಮಾಡುತ್ತಿರುವ ಅಧಿಕಾರಿಗಳು ಕೆಲವೊಂದು ಮಹತ್ವದ ದಾಖಲೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ದದ್ದಲ್ ಅವರ ಪತ್ನಿ ಸಹೋದರನ ಪುತ್ರನನ್ನು ಅಧಿಕಾರಿಗಳು ವಿಚಾರಣೆಗೆ ಕರೆದಿದ್ದಾರೆ ಎನ್ನಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next