Advertisement

ರಾಯಚೂರು:2ನೇ ಹಂತದ ಕೋವಿಶಿಲ್ಡ್‌ ವಿತರಣೆಗೆ ಚಾಲನೆ

04:41 PM Feb 09, 2021 | Team Udayavani |

ರಾಯಚೂರು: ಜಿಲ್ಲೆಯಲ್ಲಿ 2ನೇ ಹಂತದ ಕೋವಿಶಿಲ್ಡ್‌ ಲಸಿಕೆ ವಿತರಣೆಗೆ ಸೋಮವಾರ ಚಾಲನೆ ನೀಡಲಾಯಿತು. ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು
ಪಂಚಾಯತ್‌ ರಾಜ್‌ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪೊಲೀಸ್‌ ಇಲಾಖೆ ಸಿಬ್ಬಂದಿಗೆ ಲಸಿಕೆ ಹಾಕಲಾಯಿತು.

Advertisement

ನಗರದ ರಿಮ್ಸ್‌ ಆಸ್ಪತ್ರೆಯಲ್ಲಿ ಖುದ್ದು ಲಸಿಕೆ ಪಡೆಯುವ ಮೂಲಕ ಜಿಪಂ ಸಿಇಒ ಶೇಖ್‌ ತನ್ವೀರ್‌ ಆಸಿಫ್‌ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ 25 ಸೆಷನ್ಸ್‌ಗಳನ್ನು ಆರಂಭಿಸಿ ಲಸಿಕೆ ನೀಡಲಾಗುತ್ತಿದೆ. ಕೋವಿಶಿಲ್ಡ್‌ ಲಸಿಕೆಯಿಂದ ಆರೋಗ್ಯದ ಮೇಲೆ ಯಾವುದೇ ರೀತಿಯ ಅಡ್ಡ ಪರಿಣಾಮ ಬೀರುವುದಿಲ್ಲ. ಭಯ ಪಡದೆ ಲಸಿಕೆ ಪಡೆಯಬಹುದು. ಸಿಬ್ಬಂದಿ ಭಯ ಮತ್ತು ಆತಂಕ ತೊರೆದು ತಪ್ಪದೇ ಲಸಿಕೆ ಹಾಕಿಸಿಕೊಳ್ಳಬೇಕು. ಫೆ.8ರಿಂದ ಮೂರು ದಿನ ಕೋವಿಶಿಲ್ಡ್‌ ಲಸಿಕೆ ವಿತರಿಸಲಾಗುವುದು. ನಾನು ಕೂಡ ಲಸಿಕೆ ಪಡೆದಿದ್ದು, ಯಾವುದೇ ಸಮಸ್ಯೆಯಾಗಿಲ್ಲ. ನೋಂದಣಿ ಮಾಡಿಸಿಕೊಂಡ ಎಲ್ಲ ಸಿಬ್ಬಂದಿ ಕಡ್ಡಾಯವಾಗಿ ಲಸಿಕೆ ಪಡೆಯಿರಿ ಎಂದರು.

ಕಂದಾಯ, ಪೊಲೀಸ್‌, ಪೌರ ಕಾರ್ಮಿಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸಿಬ್ಬಂದಿ ಸೇರಿದಂತೆ ಈಗಾಗಲೇ 5600-6000 ಸಿಬ್ಬಂದಿ ನೋಂದಣಿ ಮಾಡಿದ್ದಾರೆ. ನಿಗದಿತ ಅವಧಿಯಲ್ಲಿ ಕೋವಿಶಿಲ್ಡ್‌ ವಿತರಣಾ ಕೇಂದ್ರದಿಂದ ಲಸಿಕೆ ಪಡೆದು ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕು ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ ಅಮೃತ್‌, ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಶ್ರೀಹರಿಬಾಬು, ಡಿವೈಎಸ್‌ಪಿ ಶಿವನಗೌಡ ಪಾಟೀಲ್‌ ಹಾಗೂ ಪೊಲೀಸ್‌ ಅಧಿಕಾರಿಗಳು ಕೋವಿಶಿಲ್ಡ್‌ ಲಸಿಕೆ ಪಡೆದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮಕೃಷ್ಣ, ಜಿಲ್ಲಾ ಶಸ್ತ್ರ ಚಿಕಿತ್ಸಕ ಅಧಿಕಾರಿ ಡಾ|ಶಂಕರ್‌, ರಿಮ್ಸ್‌ ನಿರ್ದೇಶಕ ಡಾ| ಬಸವರಾಜ್‌ ಪಿರಾಪುರೆ, ಆರ್‌ ಸಿಎಚ್‌ಒ ಡಾ| ವಿಜಯ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next