Advertisement

Raichur: ಭೀಕರ ಅಪಘಾತದಲ್ಲಿ ಮೂವರು ಯುವಕರ ದಾರುಣ ಸಾವು

10:20 PM Feb 21, 2024 | Team Udayavani |

ರಾಯಚೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ದಾರುಣವಾಗಿ ಮೃತಪಟ್ಟ ಘಟನೆ ಬುಧವಾರ ರಾತ್ರಿ ತಾಲೂಕಿನ ಮಿಟ್ಟಿ ವಲ್ಕಾಪುರ ಬಳಿ ಘಟಿಸಿದೆ. ಇಲ್ಲಿನ ಇಂದಿರಾ ನಗರದ ನಿವಾಸಿಗಳಾದ ರಾಘವೇಂದ್ರ (28), ಪರಶುರಾಮ (30), ಗೋವಿಂದ (28) ಮೃತ ದುರ್ದೈವಿಗಳಾಗಿದ್ದಾರೆ.

Advertisement

ಮೂವರು ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದರು. ಬಸ್ ಮಂತ್ರಾಲಯದಿಂದ ರಾಯಚೂರಿಗೆ ಬರುತ್ತಿದ್ದರೆ, ಬೈಕ್ ಸವಾರರು ಯರಗೇರಾ ಕಡೆಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಯರಗೇರಾ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಶವಗಳನ್ನು ರಿಮ್ಸ್ ಸಾಗಿಸಿದ್ದಾರೆ.

ಇದೇ ಮಾರ್ಗದಲ್ಲಿ ಬೆಳಗ್ಗೆ ಮತ್ತೊಂದು ಬೈಕ್ ಅಪಘಾತ ಸಂಭವಿಸಿದ್ದು, ಸವಾರ ಮೃತಪಟ್ಟಿದ್ದು, ಹಿಂಬದಿ ಸವಾರನಿಗೆ ಗಾಯಗಳಾಗಿವೆ. ರಾಯಚೂರು ವಿವಿ ಸಮೀಪದಲ್ಲಿ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಪ್ರಾಣೇಶ (19) ಎಂಬ ಯುವಕ ಮೃತಪಟ್ಟಿದ್ದಾನೆ. ಆಂಜನೇಯ ಗಾಯಗೊಂಡಿದ್ದು, ಗಾಯಾಳುವನ್ನು ರಿಮ್ಸ್ ಗೆ ದಾಖಲಿಸಲಾಗಿದೆ. ಎರಡು ಅಪಘಾತಗಳ ಕುರಿತು ಯರಗೇರಾ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next