Advertisement

Raichur; ವೈದ್ಯನ ಮೇಲೆ ಗುಂಡಿನ ದಾಳಿ ನಡೆಸಿದ ಇಬ್ಬರ ಬಂಧನ

07:35 PM Sep 04, 2023 | Team Udayavani |

ರಾಯಚೂರು: ಆ.31 ರಂದು ತಾಲೂಕಿನ ಸಾತ್ ಮೈಲ್ ಹತ್ತಿರ ಖಾಸಗಿ ಆಸ್ಪತ್ರೆ ವೈದ್ಯನ ಮೇಲೆ ಗುಂಡಿನ ದಾಳಿ ನಡೆಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ನಗರದ ಎಸ್‌ಪಿ ಕಚೇರಿಯಲ್ಲಿ ಸೋಮವಾರ ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಬಳ್ಳಾರಿ ಐಜಿಪಿ ಬಿ.ಎಸ್.ಲೋಕೇಶ ಕುಮಾರ್, ನಾಲ್ಕು ದಿನದೊಳಗೆ ಆರೋಪಿಗಳಾದ ಶರ್ಫುದ್ಧೀನ್ ಮಿಸ್ಟರಿ, ಎಂ.ಡಿ.ಖಮರುದ್ದೀನ್‌ರನ್ನು ವಶಕ್ಕೆ ಪಡೆಯಲಾಗಿದೆ.

ಇಬ್ಬರು ಆರೋಪಿಗಳು ಕಲಬುರಗಿ ಮೂಲದವರಾಗಿದ್ದಾರೆ. ಕೃತ್ಯಕ್ಕೆ ಬಳಸಿದ ಕಂಟ್ರಿ ಪಿಸ್ತೂಲ್, ಪಲ್ಸರ್ ಬೈಕ್ ವಶಕ್ಕೆ ಪಡೆಯಲಾಗಿದೆ ಎಂದು ವಿವರಿಸಿದರು. ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ ಹಣದ ಬೇಡಿಕೆ ಇಟ್ಟಿದ್ದಾಗಿ ಒಪ್ಪಿಕೊಂಡಿದ್ದಾರೆ ಎಂದು ವಿವರಿಸಿದರು.

ಆರೋಪಿಗಳಿಬ್ಬರೂ ವಿದ್ಯಾವಂತರಾಗಿದ್ದು, ಟ್ರೇಡ್ ಮಾರ್ಕೆಟ್, ಕ್ರಿಪ್ಟೊ ಕರೆನ್ಸಿ ವಿಚಾರದಲ್ಲಿ ಸಾಕಷ್ಟು ಜ್ಞಾನ ಹೊಂದಿದ್ದರು. ವೈದ್ಯರಿಗೆ 35 ಲಕ್ಷ ರೂ. ಮೌಲ್ಯದ ಹಣವನ್ನು ಕ್ರಿಪ್ಟೊ ಕರೆನ್ಸಿ ರೂಪದಲ್ಲಿ ವರ್ಗಾವಣೆ ಮಾಡುವಂತೆ ತಿಳಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next