Advertisement

ರಾಯಚೂರು: ಮಗನನ್ನು ನೀರಿನಲ್ಲಿ ಮುಳುಗಿಸಿ ಹತ್ಯೆಗೈದು, ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

03:58 PM Aug 07, 2020 | Mithun PG |

ರಾಯಚೂರು: ಜಿಲ್ಲೆಯ ಮಾನ್ವಿಯ ಕೋನಪುರ ಪೇಟೆಯ 7ನೇ ವಾರ್ಡ್ ನಲ್ಲಿ  ಮಹಿಳೆಯೊಬ್ಬಳು ತನ್ನ 5 ತಿಂಗಳ ಮಗನನ್ನು ನೀರಿನಲ್ಲಿ ಮುಳುಗಿಸಿ ಹತ್ಯೆಗೈದು, ಬಳಿಕ ತಾನೂ ಕೂಡ ನೇಣಿಗೆ ಶರಣಾದ ಘಟನೆ ನಡೆದಿದೆ.

Advertisement

ಜಾನಕಿ (27) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ತನ್ನ 5 ತಿಂಗಳ ತನ್ನ ಮಗ ರಾಘವೇಂದ್ರನನ್ನು ನೀರಿನಲ್ಲಿ ಮುಳುಗಿಸಿ ಹತ್ಯೆಮಾಡಿ ಬಳಿಕ ತಾನು ಸಾವಿಗೀಡಾಗಿದ್ದಾಳೆ ಎನ್ನಲಾಗುತ್ತಿದೆ.

ಆದರೆ ಮೃತಳ ಪತಿಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಘಟನೆ ಸಾಕಷ್ಟು ಅನುಮಾನಕ್ಕೆ ಎಡೆಮಾಡಿದೆ. ಕೌಟುಂಬಿಕ ಕಲಹವೇ ಈ ದುರ್ಘಟನೆಗೆ ಕಾರಣ ಎನ್ನಲಾಗುತ್ತಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಮಾನ್ವಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next