Advertisement

Raichur ಮಂತ್ರಾಲಯದಲ್ಲಿ ಆ.18ರಿಂದ ರಾಯರ ಆರಾಧನೋತ್ಸವ

09:29 PM Aug 14, 2024 | Team Udayavani |

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಗುರುಸಾರ್ವಭೌಮರ 353ನೇ ಆರಾಧನಾ ಮಹೋತ್ಸವ ನಿಮಿತ್ತ ಆ.18ರಿಂದ 24ರ ವರೆಗೆ ಸಪ್ತರಾತ್ರೋತ್ಸವ ಕಾರ್ಯಕ್ರಮ ಜರುಗಲಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಆಗಮಿಸುತ್ತಿದ್ದಾರೆ ಎಂದು ಶ್ರೀಮಠದ ಪೀಠಾಧಿ ಪತಿ ಶ್ರೀ ಸುಬುಧೇಂದ್ರ ತೀರ್ಥರು ತಿಳಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರತಿ ವರ್ಷ ಆರಾಧನೆ ವೇಳೆ ಶ್ರೀಮಠದಿಂದ ನೀಡುವ ಶ್ರೀರಾಘವೇಂದ್ರ ಅನುಗ್ರಹ ವಿಶೇಷ ಪ್ರಶಸ್ತಿಯನ್ನು ಬೆಂಗಳೂರಿನ ಬಿಜಿಎಸ್‌ ಮತ್ತು ಎಸ್‌ಜೆಬಿಐಟಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ. ಪ್ರಕಾಶನಾಥ ಸ್ವಾಮೀಜಿ, ಬೆಂಗಳೂರಿನ ವಿದ್ವಾನ್‌ ರಘುಪತಿ ಉಪಾಧ್ಯಾಯ, ವಾರಣಸಿಯ ಪ್ರೊ. ವರಜಾ ಭೂಷಣ ಓಝಾ ಹಾಗೂ ಮೈಸೂರಿನ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next