Advertisement

Raichuru: ಶಿಕ್ಷಕಿಯೊಂದಿಗೆ ಅನುಚಿತ ವರ್ತನೆ;  ಪ್ರಭಾರ ಪ್ರಾಚಾರ್ಯಗೆ ಥಳಿತ

09:44 PM Aug 12, 2024 | Team Udayavani |

ರಾಯಚೂರು: ಸಮೀಪದ ಯರಮರಸ್ ಬಳಿಯಿರುವ ಆದರ್ಶ ವಿದ್ಯಾಲಯದ ಪ್ರಭಾರ ಪ್ರಾಚಾರ್ಯ ಮೆಹಬೂಬ್ ಅಲಿ ತರಬೇತಿಗೆ ಬಂದಿದ್ದ ಶಿಕ್ಷಕಿ ಜತೆ ಅನುಚಿತವಾಗಿ ವರ್ತಿಸಿದ್ದರಿಂದ ಧರ್ಮದೇಟು ತಿಂದಿರುವ ಘಟನೆ ಸೋಮವಾರ ನಡೆದಿದೆ.

Advertisement

ಶಿಕ್ಷಕಿಯ  ಮೊಬೈಲ್‌ಗೆ ಅಶ್ಲೀಲ (ಕೆಟ್ಟ)  ಮೆಸೇಜ್‌ಗಳನ್ನು ಕಳಿಸುತ್ತಿದ್ದ ಶಿಕ್ಷಕ, ರಾತ್ರಿ ಮಲಗಲು ಬಾ ಎಂದೂ ಕರೆದಿದ್ದ. ಇದರಿಂದ ಶಿಕ್ಷಕಿ ತಮ್ಮವರಿಗೆ ಮಾಹಿತಿ ತಿಳಿಸಿದ್ದರು. ಶಾಲೆಗೆ ಬಂದ ಶಿಕ್ಷಕಿಯ ಬಂಧುಗಳು, ಸಾರ್ವಜನಿಕರು ಪ್ರಭಾರ ಪ್ರಾಚಾರ್ಯನಿಗೆ ಚೆನ್ನಾಗಿ ಥಳಿಸಿ ಧರ್ಮದೇಟು ಕೊಟ್ಟಿದ್ದಾರೆ.

ಇದರಿಂದ ಎಚ್ಚೆತ್ತ ಪ್ರಭಾರ ಪ್ರಾಚಾರ್ಯ ಮೆಹಬೂಬ್ ಅಲಿ, ತಾನು ಮಾಡಿದ್ದು ತಪ್ಪಾಗಿದೆ. ಇನ್ನು ಮುಂದೆ ಹಾಗೆ ಮಾಡುವುದಿಲ್ಲ ಎಂದು ಮುಚ್ಚಳಿಕೆ ಬರೆಸಿಕೊಂಡಿದ್ದಾರೆ ಹಾಗೂ  ಶಿಕ್ಷಕಿಯ ಕಾಲಿಗೆ ಬೀಳುವಂತೆ ಮಾಡಿದ್ದಾರೆ. ಆದರೆ, ಈ ಕುರಿತು ಗ್ರಾಮೀಣ ಠಾಣೆ ಅಥವಾ  ಮಹಿಳಾ ಠಾಣೆಯಲ್ಲಾಗಲಿ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next