Advertisement

ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಸ್‌

06:53 PM Jun 17, 2020 | Naveen |

ರಾಯಚೂರು: ಜಿಲ್ಲೆಯಲ್ಲಿ ಜೂ.18ರಂದು ದ್ವಿತೀಯ ಪಿಯುಸಿ ಇಂಗ್ಲಿಷ್‌ ಹಾಗೂ 25ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಕೋವಿಡ್ ವೈರಸ್‌ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ರವಿವಾರ ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಸರ್‌ ಸಿಂಪರಣೆ ಮಾಡಲಾಯಿತು,

Advertisement

ಸರ್ಕಾರದ ನಿರ್ದೇಶನದ ಮೇರೆಗೆ ಜಿಲ್ಲಾಡಳಿತ ಸಿದ್ಧತಾ ಕಾರ್ಯ ಕೈಗೊಂಡಿದೆ. 86 ಪರೀಕ್ಷಾ ಕೇಂದ್ರ ಗುರುತಿಸಿದ್ದ, ಆ ಎಲ್ಲ ಶಾಲೆಗಳಲ್ಲಿ ಸ್ಯಾನಿಟೈಜೇಷನ್‌ ಮಾಡಲಾಯಿತು. ಜಿಲ್ಲೆಯಲ್ಲಿ 30,413 ಎಸ್‌ಎಸ್‌ ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಈ ಪೈಕಿ 757 ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ಬದಲಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ 19 ಕಂಟೇನ್ಮೆಂಟ್‌ ವಲಯ ನಿರ್ಮಿಸಿದ್ದು, ಯಾವುದೇ ಸಮಸ್ಯೆ ಆಗದ ರೀತಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಎಚ್‌.ಗೋನಾಳ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next