Advertisement

ರಾಯಚೂರು ಕೃಷಿ ವಿವಿ ಕ್ಯಾಂಪಸ್‌ನಲ್ಲಿ ಸೈಕಲ್‌ ಸವಾರಿ

11:02 AM Nov 09, 2019 | Naveen |

●ಸಿದ್ಧಯ್ಯಸ್ವಾಮಿ ಕುಕುನೂರು
ರಾಯಚೂರು:
ರೈತ ಸ್ನೇಹಿಯಾಗಿ ಕೆಲಸ ಮಾಡುತ್ತಿ ರುವ ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಈಗ ಪರಿಸರ ಮಾಲಿನ್ಯ ನಿಯಂತ್ರಣಕ್ಕೂ ಆದ್ಯತೆ ನೀಡುತ್ತಿದೆ. ಕ್ಯಾಂಪಸ್‌ ಒಳಗೆ ವಾಹನಗಳ ಓಡಾಟಕ್ಕೆ ಬ್ರೇಕ್‌ ಹಾಕಿ ಸೈಕಲ್‌ ಬಳಸಲು ಸಜ್ಜಾಗಿದೆ.

Advertisement

ಕೆಲ ದಿನಗಳ ಹಿಂದೆ ಹಸಿರು ಪದವೀಧಾರಣೆ ಕಾರ್ಯಕ್ರಮ ಜಾರಿಗೊಳಿಸಿ ಪ್ರತಿ ವಿದ್ಯಾರ್ಥಿಗೆ ಒಂದು ಗಿಡ ಬೆಳೆಸುವ ಹೊಣೆ ನೀಡಲಾಗಿತ್ತು. ಈಗ ಕ್ಯಾಂಪಸ್‌ ಒಳಗೆ ಪರಿಸರ ಹಾನಿ ತಡೆಗಟ್ಟುವ ನಿಟ್ಟಿನಲ್ಲಿ ಕುಲಪತಿ ಡಾ| ಕೆ.ಎನ್‌.ಕಟ್ಟಿಮನಿ ಸೈಕಲ್‌ಗ‌ಳ ವ್ಯವಸ್ಥೆ ಮಾಡಲು ಮುಂದಾಗಿದ್ದಾರೆ.

ವಿವಿ ಸಿಬ್ಬಂದಿ, ವಿದ್ಯಾರ್ಥಿಗಳು ತಮ್ಮ ಗುರುತಿನ ಚೀಟಿ ತೋರಿಸಿ ಸೈಕಲ್‌ ಪಡೆಯಬಹುದು. ಇದರಿಂದ ಆಡಳಿತ ಭವನ, ಕಾಲೇಜ್‌, ಬ್ಯಾಂಕ್‌, ಪ್ರಯೋಗಾಲಯ, ದೂರದಲ್ಲಿರುವ ವಿವಿಯ ಹೊಲಗಳಿಗೆ ಭೇಟಿಗೆ ತೆರಳಬಹುದು. ಇದರಿಂದ ಮಾಲಿನ್ಯ ನಿಯಂತ್ರಣದ ಜತೆಗೆ ಆರೋಗ್ಯಕ್ಕೂ ಒಳ್ಳೆಯದು ಎನ್ನುವುದು ಸಿಬ್ಬಂದಿ ವಿವರಣೆ.

ಆರಂಭದಲ್ಲಿ ಪ್ರಯೋಗಾತ್ಮಕವಾಗಿ 10 ಸೈಕಲ್‌ ಖರೀದಿಸಲಾಗಿದೆ. ಇದಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ಬೆಳಗ್ಗೆಯಿಂದ ಸಂಜೆವರೆಗೂ ಸೈಕಲ್‌ ಗಳು ಬ್ಯುಸಿಯಾಗುತ್ತಿವೆ. ಅಲ್ಲದೇ, ಒಬ್ಬರಾಗುತ್ತಿದ್ದಂತೆ ಒಬ್ಬರು ಸೈಕಲ್‌ ತೆಗೆದುಕೊಂಡು ಹೋಗಲು ಕಾಯುತ್ತಿದ್ದಾರೆ. ಇದರಿಂದ ಶೀಘ್ರವೇ 30 ಸೈಕಲ್‌ ಖರೀದಿಗೆ ಚಿಂತನೆ ನಡೆಸಲಾಗಿದೆ. ಎಲ್ಲ ವಿಭಾಗಗಳು, ವಿದ್ಯಾರ್ಥಿ, ವಿದ್ಯಾರ್ಥಿನಿಯರ ವಸತಿ ನಿಲಯಗಳಿಗೆ ಪ್ರತ್ಯೇಕ ಸೈಕಲ್‌ ನೀಡುವ ಉದ್ದೇಶ ಇದೆ ಎನ್ನುತ್ತಾರೆ ಕುಲಪತಿ ಡಾ|ಕಟ್ಟಿಮನಿ. ಅಲ್ಲದೇ ನಿತ್ಯ ಬೆಳಗ್ಗೆ ಹಾಗೂ ಸಂಜೆ ವಿವಿ ವಾಯು ವಿಹಾರಕ್ಕೆ ಬರುವ ನೂರಾರು ಜನ ಬೈಕ್‌ ಗಳನ್ನು ತರುತ್ತಿದ್ದು, ಅವರಿಗೂ ಈ ಯೋಜನೆ ಪ್ರೇರಣೆಯಾಗುತ್ತಿದೆ.

ದೊಡ್ಡ ಮೈದಾನ: ಸುಮಾರು 700 ಎಕರೆ ಪ್ರದೇಶದಲ್ಲಿ ರಾಯಚೂರು ಕೃಷಿ ವಿವಿ ಸ್ಥಾಪನೆಗೊಂಡಿದೆ. ಒಂದು ತುದಿಯಿಂದ ಮತ್ತೂಂದು ತುದಿಗೆ ತೆರಳಬೇಕಾದರೆ ವಾಹನಗಳನ್ನೇ ಬಳಸಲಾಗುತ್ತಿದೆ. ಆಡಳಿತಾತ್ಮಕ ಪ್ರದೇಶವೇ ಏನಿಲ್ಲವೆಂದರೂ 250-300 ಎಕರೆ ಪ್ರದೇಶವಿದೆ.

Advertisement

ಇನ್ನು ಉಳಿದೆಲ್ಲ ಪ್ರದೇಶಗಳಲ್ಲಿ ವಿವಿಯಿಂದ ಸಂಶೋಧನಾ ತಳಿಗಳನ್ನು ಬೆಳೆಯಲಾಗುತ್ತಿದೆ. ಹೀಗೆ ನಾನಾ ಕೆಲಸಗಳಿಗೆ ನಿತ್ಯ ಒಂದೆರಡು ಬಾರಿ ಓಡಾಟ ಇದ್ದೇ ಇರುತ್ತದೆ. ಇದನ್ನು ಮನಗಂಡ ಆಡಳಿತ ಮಂಡಳಿ ಇಂಥ ಪ್ರಯೋಗಕ್ಕೆ ಮುಂದಾಗಿದೆ. ಕೃಷಿ ವಿವಿ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next