Advertisement

ಅಬಕಾರಿ ದಾಳಿ: ಪಾವೂರಿನಲ್ಲಿ ಅಕ್ರಮ ಕಳ್ಳಬಟ್ಟಿ ಸಾರಾಯಿ ವಶ

08:13 PM Apr 22, 2020 | keerthan |

ಮಂಗಳೂರು: ದಕ್ಷಿಣ ಕನ್ನಡ ಅಬಕಾರಿ ಇಲಾಖೆಯ ತಂಡ ಇಂದು ಪಾವೂರಿನಲ್ಲಿ ದಾಳಿ ನಡೆಸಿ ತಯಾರಿಸಲಾಗುತ್ತಿದ್ದ ಕಳ್ಳಬಟ್ಟಿಯನ್ನು ವಶಕ್ಕೆ ಪಡೆಯಲಾಗಿದೆ.

Advertisement

ಪಾವೂರು ಉಳಿಯ ಗ್ರಾಮದ ನೇತ್ರಾವತಿ ನದಿಯ ದಡದಲ್ಲಿ ಸುಮಾರು 2.5 ಲೀಟರ್ ಕಳ್ಳಭಟ್ಟಿ ಸಾರಾಯಿ, ಭಟ್ಟಿ ಸಾರಾಯಿ ತಯಾರಿಕೆಗಾಗಿ ದಾಸ್ತಾನಿಸಿರುವ 900 ಲೀಟರ್ ಗಳಷ್ಟು ಹುಳಿ ರಸ, 75 ಕೆಜಿ ಬೆಲ್ಲ ಹಾಗೂ ಭಟ್ಟಿ ತಯಾರಿಸಲು ಉಪಯೋಗಿಸುವ ಸಲಕರಣೆಗಳು ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಆರೋಪಿ ಪ್ರೇಮ್ ಫೆರಾರೋ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಅಬಕಾರಿ ಉಪ ಆಯುಕ್ತರಾದ ಶೈಲಜಾ ಕೋಟೆ ರವರ ನಿರ್ದೇಶನದಂತೆ ಮಂಗಳೂರು ಉಪ ವಿಭಾಗ-1 ರ ಅಬಕಾರಿ ಡಿವೈಎಸ್ಪಿ ಶಿವಪ್ರಸಾದ್ ನೇತೃತ್ವದಲ್ಲಿ ಉಪ ವಿಭಾಗ-1ರ ಅಬಕಾರಿ ಇನ್ಸ್ಪೆಕ್ಟರ್ ಸೀಮಾ, ರತ್ನಾಕರ್ ರೈ, ಸಬ್ ಇನ್ಸ್ಪೆಕ್ಟರ್ ಪ್ರತಿಭಾ ಜಿ ಹಾಗೂ ಉಪ ವಿಭಾಗ 1 ರ ಎಲ್ಲಾ ಸಿಬ್ಬಂದಿಗಳೊಂದಿಗೆ ದಾಳಿ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next