Advertisement

ರೈತರಿಂದ ರೈಲು ತಡೆ, ಪ್ರತಿಭಟನೆ; ಉತ್ತರಪ್ರದೇಶದ ಹಲವೆಡೆ ರೈಲು ಸಂಚಾರ ವ್ಯತ್ಯಯ

01:23 PM Oct 18, 2021 | Team Udayavani |

ನವದೆಹಲಿ: ಉತ್ತರಪ್ರದೇಶದ ಲಖೀಂಪುರ್ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರನ್ನು ಹುದ್ದೆಯಿಂದ ವಜಾ ಮಾಡಿ, ಬಂಧಿಸುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೋಮವಾರ(ಅಕ್ಟೋಬರ್ 18) ಕರೆ ನೀಡಿರುವ ಆರು ಗಂಟೆಗಳ ರೈಲ್ ರೋಖೋ ಪರಿಣಾಮ ಹಲವೆಡೆ ರೈಲು ಸಂಚಾರ ವ್ಯತ್ಯಯ ಉಂಟಾಗಿದೆ ಎಂದು ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ಗಂಗಾವತಿ: ಸಾಣಾಪುರ್ ಲೇಕ್; ಜಂಪಿಂಗ್ ಮಾಡಲು ಹೋಗಿ ಇಬ್ಬರು ಐಟಿ ಉದ್ಯೋಗಿಗಳು ನೀರು ಪಾಲು

ರೈಲ್ವೆ ಅಧಿಕಾರಿಗಳ ಮಾಹಿತಿ ಪ್ರಕಾರ, ರೈತರ ರೈಲ್ ರೋಖೊ ಪ್ರತಿಭಟನೆಯಿಂದ ಫಿರೋಜ್ ಪುರ್, ಫಾಝಿಲ್ಕಾ, ಫಿರೋಜ್ ಪುರ್ ಲೂಧಿಯಾನ ಮಾರ್ಗಗಳಲ್ಲಿ ರೈಲು ಸಂಚಾರಕ್ಕೆ ಅಡ್ಡಿಯುಂಟಾಗಿರುವುದಾಗಿ ವರದಿ ವಿವರಿಸಿದೆ.

ವರದಿಯ ಪ್ರಕಾರ, ಉತ್ತರಪ್ರದೇಶದ ಬಹ್ರೈಚ್, ಮೈಲಾನಿ, ಬಹ್ರೈಚ್ ನನ್ಪಾರಾ, ಗೋರಖ್ ಪುರ್ ಮೈಲಾನಿ ಮತ್ತು ಲಕ್ನೋ-ಮೈಲಾನಿ ಮಾರ್ಗಗಳಲ್ಲಿಯೂ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ವರದಿ ಹೇಳಿದೆ.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಬೆಳಗ್ಗೆ 10ಗಂಟೆಯಿಂದ ಸಂಜೆ 6ಗಂಟೆವರೆಗೆ ರೈಲ್ ರೋಖೋ ನಡೆಯಲಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪ್ರಕಟಣೆಯಲ್ಲಿ ತಿಳಿಸಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next