Advertisement

ರೈಲು ಸೇವೆ ಸ್ಥಗಿತಗೊಳಿಸಲ್ಲ: ಅಂಗಡಿ

11:22 PM Mar 15, 2020 | Team Udayavani |

ಬೆಳಗಾವಿ: ಕೊರೊನಾ ಭೀತಿಯಿಂದಾಗಿ ದೇಶದ ಯಾವುದೇ ಕಡೆಗಳಲ್ಲಿಯೂ ರೈಲು ಸಂಚಾರ ಸೇವೆ ಸ್ಥಗಿತಗೊಳಿಸುವುದಿಲ್ಲ. ಈ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದರು.

Advertisement

ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ಕಲಬುರಗಿ ಸೇರಿದಂತೆ ಯಾವುದೇ ಕಡೆಗಳಲ್ಲೂ ರೈಲು ಸೇವೆ ಸ್ಥಗಿತ ಮಾಡುವುದಿಲ್ಲ. ಪ್ರಯಾಣಿಕರು ಆತಂಕ ಪಡುವ ಅಗತ್ಯವಿಲ್ಲ. ಬೇರೆ ದೇಶಗಳಿಗೆ ಹೋಲಿಕೆ ಮಾಡಿದರೆ ಭಾರತದಲ್ಲಿ ಸುರಕ್ಷಿತ ವಾತಾವರಣ ಇದೆ. ಈಗಾಗಲೇ ರೈಲು ನಿಲ್ದಾಣಗಳಲ್ಲಿ ಸ್ವತ್ಛತೆ ಬಗ್ಗೆ ಹೆಚ್ಚಿನ ಗಮನ ಹರಿಸಲಾಗುತ್ತಿದೆ.

ಪ್ರತಿನಿತ್ಯ ರೈಲು ಹಾಗೂ ನಿಲ್ದಾಣಗಳ ಸುತ್ತಮುತ್ತ ಸ್ವತ್ಛತೆ ಕಾಪಾಡಿಕೊಳ್ಳಲಾಗುತ್ತಿದೆ. ಕೊರೊನಾ ವೈರಸ್‌ ಬಗ್ಗೆ ಪ್ರಯಾಣಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಕೇಂದ್ರ ಸರ್ಕಾರ ಅನೇಕ ಕ್ರಮ ಕೈಗೊಂಡಿದ್ದು, ಸಾರ್ವಜನಿಕರು ಇದಕ್ಕೆ ಸಹಕರಿಸಬೇಕು. ಯಾವುದೇ ಊಹಾಪೋಹ ಹಾಗೂ ವದಂತಿಗಳಿಗೆ ಕಿವಿಗೊಡಬಾರದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next