Advertisement

Railway: ಸಕಲೇಶಪುರ, ತಿರುಪತಿ ನಡುವೆ ಹೊಸ ರೈಲು: ಕೇಂದ್ರ ಸಚಿವ ಸೋಮಣ್ಣ

10:49 PM Jul 18, 2024 | Team Udayavani |

ಹಾಸನ/ಕುಣಿಗಲ್‌: ಸಕಲೇಶಪುರ, ಹಾಸನ, ಕುಣಿಗಲ್‌ ಮಾರ್ಗವಾಗಿ ತಿರುಪತಿಗೆ ಹೊಸ ರೈಲು ಸಂಚಾರ ಆರಂಭಕ್ಕೆ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಭರವಸೆ ನೀಡಿದರು.

Advertisement

ಕುಣಿಗಲ್‌ನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ನಿಲ್ದಾಣದಿಂದ ಕುಣಿಗಲ್‌, ಹಾಸನ ಮಾರ್ಗವಾಗಿ ಕಾರವಾರಕ್ಕೆ ಸಂಚರಿಸುವ ಪಂಚಗಂಗ ಎಕ್ಸ್‌ಪ್ರೆಸ್‌ ರೈಲಿಗೆ ಕುಣಿಗಲ್‌ ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ ವ್ಯವಸ್ಥೆಯಿದ್ದು, ಕಾಯಂಗೆ ಒತ್ತು ನೀಡಲಾಗುವುದು ಎಂದರು.

ಸಿದ್ದರಾಮಯ್ಯ ಕೇಂದ್ರವನ್ನು ಬೈದರೂ ಕೆಲಸ ಮಾಡುತ್ತೇವೆ: ವಿ. ಸೋಮಣ್ಣ
ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರಕಾರವನ್ನು ಬೈಯ್ಯುತ್ತಾರೆ. ಆದರೆ ಹಾಸನ ರೈಲ್ವೇ ಮೇಲ್ಸೇತುವೆಗೆ ರಾಜ್ಯ ಸರಕಾರದ ಪಾಲಿನ ಅನುದಾನ ಕೊಟ್ಟಿಲ್ಲ ಎಂದು ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಏನಾದ್ರೂ ಮಾತಾಡಿಕೊಳ್ಳಲಿ, ರಾಜ್ಯ ಸರಕಾರ ಅನುದಾನ ಕೊಟ್ಟರೂ ಕೊಡದಿದ್ದರೂ ಹಾಸನ ರೈಲ್ವೆ ಮೇಲ್ಸೇತುವೆಗೆ ಇಲಾಖೆಯಿಂದಲೇ ಅನುದಾನ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next