Advertisement

ರಾಜ್ಯದ ಕೆಲವೆಡೆ ಗುಡುಗು ಸಹಿತ ಮಳೆ

06:30 AM Apr 02, 2018 | Team Udayavani |

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಪೂರ್ವ ಮುಂಗಾರು ಅಬ್ಬರ ಮುಂದುವರಿದಿದ್ದು, ಭಾನುವಾರ ಕೂಡ ಕೆಲವೆಡೆ ಗುಡುಗು ಸಹಿತ ಮಳೆಯಾಗಿದೆ.

Advertisement

ಚಾಮರಾಜನಗರ, ಶಿವಮೊಗ್ಗ, ಮೈಸೂರು, ಹಾಸನ, ತುಮಕೂರು, ಮಂಡ್ಯ ಸುತ್ತಲಿನ ಪ್ರದೇಶಗಳಲ್ಲಿ ಹಗುರವಾದ ಮಳೆಯಾಗಿದೆ. ಸೋಮವಾರ ಕೂಡ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ತಿಳಿಸಿದೆ.

ಕಡಿಮೆ ಒತ್ತಡದ ತಗ್ಗು (ಟ್ರಫ್) ಮತ್ತು ಮೇಲ್ಮೆ„ಸುಳಿಗಾಳಿ ಪ್ರಭಾವ ಈಗಲೂ ಮುಂದುವರಿದಿರುವುದರಿಂದ ಮಳೆ ಆಗುತ್ತಿದೆ. ಉತ್ತರ ಒಳನಾಡು ಮತ್ತು ಕರಾವಳಿಯಲ್ಲಿ ಇದರ ಅಬ್ಬರ ಇಲ್ಲ. ಹಾಗಾಗಿ, ಅಲ್ಲೆಲ್ಲಾ ರಣಬಿಸಿಲು ಇದ್ದು, ಹೈದರಾಬಾದ್‌ ಕರ್ನಾಟಕದಲ್ಲಿ ತಾಪಮಾನ ಗರಿಷ್ಠ 40 ಡಿಗ್ರಿ ಸೆಲ್ಸಿಯಸ್‌ ಆಸುಪಾಸಿದೆ.

ಈ ಮಧ್ಯೆ ಬೆಂಗಳೂರು ನಗರ ಮತ್ತು ಗ್ರಾಮಾಂತರದಲ್ಲಿ ಸತತ ಮೂರು ದಿನಗಳಿಂದ ಸುರಿಯುತ್ತಿದ್ದ ಮಳೆ ಭಾನುವಾರ ಬಿಡುವು ನೀಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next