Advertisement

ಮುಂದುವರಿದ ಮಳೆ ಅಬ್ಬರ

01:33 AM Jul 30, 2019 | Team Udayavani |

ನವದೆಹಲಿ: ಮಹಾರಾಷ್ಟ್ರ, ಅಸ್ಸಾಂ, ರಾಜಸ್ಥಾನ, ಒಡಿಶಾಗಳಲ್ಲಿ ವರುಣನ ಅಬ್ಬರ ಮುಂದುವರಿದಿದೆ. ಅಸ್ಸಾಂನಲ್ಲಿ ಪ್ರವಾಹಕ್ಕೆ ಸೋಮವಾರ ಮತ್ತೆ ನಾಲ್ವರು ಬಲಿಯಾಗಿದ್ದು, ಮೃತರ ಸಂಖ್ಯೆ 86ಕ್ಕೇರಿಕೆಯಾಗಿದೆ.

Advertisement

ಇನ್ನು ಮಹಾರಾಷ್ಟ್ರದಾದ್ಯಂತ ಜು.25ರಿಂದ ಉತ್ತಮ ಮಳೆಯಾದ ಕಾರಣ, ಅಣೆಕಟ್ಟೆಗಳಲ್ಲಿ ನೀರಿನ ಪ್ರಮಾಣ ಶೇ.8ರಷ್ಟು ಹೆಚ್ಚಾಗಿದೆ. ಆದರೆ, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ನೀರಿನ ಪ್ರಮಾಣ ಶೇ.20ರಷ್ಟು ಕಡಿಮೆಯಿದೆ. ನಾಸಿಕ್‌ನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಸೋಮವಾರ ಗಂಗಾಪುರ ಅಣೆಕಟ್ಟಿನಿಂದ ಒಂದು ಸಾವಿರ ಕ್ಯುಸೆಕ್‌ ನೀರನ್ನು ಹೊರಬಿಡಲಾಗಿದೆ.

ಮಧ್ಯಪ್ರದೇಶದ ದಾಮೋಹ್‌ನಲ್ಲಿ ಮೊಸಳೆಯೊಂದು ಮನೆಯೊಳಕ್ಕೆ ನುಗ್ಗಿದ್ದು, ಅದನ್ನು ಕೊನೆಗೂ ಸೆರೆಹಿಡಿಯುವಲ್ಲಿ ಅರಣ್ಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next