Advertisement

ಮಂಗಳೂರಿನಲ್ಲಿ ಮುಂದುವರಿದ ಮಳೆ: ಹಲವು ಪ್ರದೇಶಗಳು ಜಲಾವೃತ, ಕುಸಿದ ರಸ್ತೆ

12:40 PM Sep 11, 2020 | keerthan |

ಮಂಗಳೂರು: ನಗರದಲ್ಲಿ ಗುರುವಾರದಿಂದ ಸತತ ಮಳೆಯಾಗುತ್ತಿದ್ದು, ಇಂದೂ ಮುಂದುವರಿದಿದೆ. ನಿರಂತರ ಮಳೆಯ ಪರಿಣಾಮ ಹಲವು ತಗ್ಗು ಪ್ರದೇಶಗಳು ಮುಳುಗಡೆಯಾಗಿದ್ದು, ಕುಂಟಿಕಾನ ಬಳಿ ರಸ್ತೆಯ ಪಕ್ಕ ಕುಸಿತವಾಗಿದೆ.

Advertisement

ನಗರದಲ್ಲಿ ಕಳೆದ ರಾತ್ರಿಯೂ ನಿರಂತರ ಮಳೆಯಾಗಿದೆ. ಕೊಟ್ಟಾರ ಚೌಕಿ, ಅಳಕೆ, ಅಶೋಕ್ ನಗರ, ಪಾಂಡೇಶ್ವರ ಭಾಗದಲ್ಲಿ ನೀರು ನಿಂತಿದ್ದು, ತಗ್ಗು ಪ್ರದೇಶಗಳು ಮುಳುಗಡೆಯಾಗಿದೆ.

ಕುಂಟಿಕಾನ ಬಳಿಯ ಬೋಂದೆಲ್ ಗೆ ತೆರಳುವ ರಸ್ತೆಯ ಪಕ್ಕದಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದ ಭಾಗಶಃ ರಸ್ತೆಗೆ ಹಾನಿಯಾಗಿದೆ.

ನಗರದ ದೇರೆಬೈಲ್ ಬಳಿ ರಸ್ತೆ ಬದಿಯ ಗೋಡೆ ಕುಸಿದು ಬಿದ್ದಿದೆ. ಹಲವು ಕಡೆ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

Advertisement

ಇದನ್ನೂ ಓದಿ: ದೇವಸ್ಥಾನದ ಆವರಣದಲ್ಲಿ ಮೂವರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ: ಹುಂಡಿ ದೋಚಿ ಪರಾರಿ

Advertisement

Udayavani is now on Telegram. Click here to join our channel and stay updated with the latest news.

Next