Advertisement

Rain ದಕ್ಷಿಣ ಕನ್ನಡ ಜಿಲ್ಲೆ: ಮಳೆ ಇಳಿಮುಖ

01:23 AM Aug 10, 2024 | Team Udayavani |

ಮಂಗಳೂರು/ ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದೆ. ಜಿಲ್ಲೆಯ ಕೆಲವು ಕಡೆಗಳಲ್ಲಿ ಬಿಟ್ಟು ಬಿಟ್ಟು ಸಾಧಾರಣ ಮಳೆಯಾಗಿದೆ.

Advertisement

ಉಳಿದಂತೆ ಮೋಡ ಮತ್ತು ಬಿಸಿಲಿನಿಂದ ಕೂಡಿದ ವಾತಾವರಣ ಇತ್ತು. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಆ.10ರಂದು ಬೆಳಗ್ಗೆವರೆಗೆ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉಳಿದಂತೆ ಯಾವುದೇ ಅಲರ್ಟ್‌ ಇಲ್ಲ.

ಉಡುಪಿ ಜಿಲ್ಲೆಯ ಉಡುಪಿ, ಕಾರ್ಕಳ, ಕುಂದಾಪುರ, ಬೈಂದೂರು, ಕಾಪು, ಪಡುಬಿದ್ರಿ ಭಾಗದಲ್ಲಿ ಬಿಸಿಲು ಮೋಡ ಕವಿದ ವಾತಾವರಣದ ನಡುವೆ ಬಿಟ್ಟುಬಿಟ್ಟು ಮಳೆ ಸುರಿದಿದೆ.

ಗುರುವಾರ ತಡರಾತ್ರಿ ಕೆಲವೆಡೆ ನಿರಂತರ ಮಳೆ ಸುರಿದಿದೆ. ಶುಕ್ರವಾರ ಬೆಳಗ್ಗೆ 8.30ರ ಹಿಂದಿನ 24 ಗಂಟೆಗಳ ಕಾಲ 26.9 ಮಿ. ಮೀ. ಸರಾಸರಿ ಮಳೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next