Advertisement

ಮಳೆಹಾನಿ: ತುರ್ತು ಪರಿಹಾರ ಕ್ರಮಕ್ಕೆ ಸೂಚನೆ

12:03 PM Jun 21, 2019 | Suhan S |

ಕುಂದಾಪುರ, ಜೂ. 20: ಮಳೆಗಾಲದ ಸಂದರ್ಭದಲ್ಲಿ ಮಳೆಗಾಳಿ ಪ್ರವಾಹದಿಂದ ಯಾವುದೇ ಜೀವಹಾನಿ, ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಉಂಟಾಗಬಹುದಾದ ಹಾನಿ ನಷ್ಟ್ಟ ಗಳನ್ನು ತಡೆಗಟ್ಟುವ ಸಲುವಾಗಿ ಹಾಗೂ ಸಂತ್ರಸ್ತರಿಗೆ ಸೂಕ್ತ ಪರಿಹಾರ ಮುನ್ನೆಚ್ಚರಿಕೆ ನೀಡಲು ಎಲ್ಲ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರಾಕೃತಿಕ ವಿಕೋಪದದಿಂದ ಸಂಭವಿಸಬಹುದಾದ ಘಟನೆಗಳನ್ನು ಎದುರಿಸಲು ತಾಲೂಕು ಆಡಳಿತವು ಸರ್ವಸನ್ನದ್ಧವಾಗಿರುವುದಾಗಿ ಸಹಾಯಕ ಕಮಿಷನರ್‌ ಡಾ| ಎಸ್‌.ಎಸ್‌. ಮಧುಕೇಶ್ವರ್‌ ತಿಳಿಸಿದ್ದಾರೆ.

Advertisement

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಷ್ಟ್ರೀಯ ಹೆದ್ದಾರಿ ಅಪೂರ್ಣ ಕಾಮಗಾರಿ ಆಗುತ್ತಿರುವ ಪ್ರದೇಶಗಳಲ್ಲಿ ಮಳೆ ನೀರು ಸಂಗ್ರಹಗೊಳ್ಳದೆ ಸರಾಗವಾಗಿ ಹರಿದು ಹೋಗಲು ಕ್ರಮವಹಿಸುವಂತೆ, ಪಾದಚಾರಿಗಳಿಗೆ ಮತ್ತು ವಾಹನ ಸವಾರರಿಗೆ ಅನುಕೂಲವಾಗುವಂತೆ ಸೂಕ್ತ ಸೂಚನಾ ಫಲಕಗಳನ್ನು ಅಳವಡಿಸಬೇಕು. ರಾಷ್ಟ್ರೀಯ ಹೆದ್ದಾರಿ ರಸ್ತೆ ಬದಿಯಲ್ಲಿ ನೀರು ಸರಾಗವಾಗಿ ಹರಿದು ಹೋಗಲು ಡ್ರೈನೇಜ್‌ ಕಲ್ಪಿಸಬೇಕು ಎಂದು ಮುಖ್ಯಾಧಿಕಾರಿ ಹಾಗೂ ಪಿಡಿಓಗಳ ಸಹಕರಾರದೊಂದಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ನವಯುಗ ಕನ್‌ಸ್ಟ್ರಕ್ಷನ್ಸ್‌ ಹಾಗೂ ಐಆರ್‌ಬಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಗುಂಡಿ ಮುಚ್ಚಿಸಿ

ಸರಕಾರಿ ಸ್ಥಳದಲ್ಲಿರುವ ತೆರೆದ ಕೊಳವೆ ಬಾವಿ ಹಾಗೂ ಇಂಗುಗುಂಡಿ, ಕೊಜೆಹೊಂಡ, ಕಲ್ಲುಕೋರೆ ಹೊಂಡ ಇರುವಲ್ಲಿ ರೇಡಿಯಂನಿಂದ ಕೂಡಿರುವ ಫಲಕಗಳನ್ನು ಅಳವಡಿಸಬೇಕು. ಖಾಸಗಿ ಸ್ಥಳಗಳಲ್ಲಿರುವ ಅಪಾಯಕಾರಿ ಹೊಂಡಗಳನ್ನು ಸಂಬಂಧಪಟ್ಟ ಜಾಗದ ಮಾಲೀಕರಿಂದ ಮುಚ್ಚಿಸಬೇಕು, ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲು ಗ್ರಾಮ ಪಂಚಾಯತ್‌ ಅಭಿ ವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ನಾದುರಸ್ತಿಯಲ್ಲಿರುವ ರಸ್ತೆ ಹಾಗೂ ಕಿರು ಸೇತುವೆಗಳ ರಿಪೇರಿ ಬಗ್ಗೆ ಕ್ರಮವಹಿಸುವಂತೆ, ಪ್ರಾಕೃತಿಕ ವಿಕೋಪದಡಿ ವಾಸ್ತವ್ಯದ ಮನೆ ಇತರ ಕಟ್ಟಡಗಳು ಹಾನಿಯಾದ ಬಗ್ಗೆ ಹಾನಿಯ ಶೇಕಡಾವಾರು ವರದಿ ಮತ್ತು ಅಂದಾಜು ನಷ‌rವನ್ನು ಜರೂರು ವರದಿ ಮಾಡುವಂತೆ ತಿಳಿಸಲಾಯಿತು. ಎಲ್ಲೆಲ್ಲಿ ಕಾಲು ಸಂಕದಿಂದ ಮಕ್ಕಳು ಶಾಲೆಗೆ ಬರುತ್ತಾರೆ ಎಂಬುದರ ಬಗ್ಗೆ ವರದಿ ನೀಡಲು ತಿಳಿಸಲಾಗಿದೆ.

Advertisement

ಶಾಲೆಗಳ ದುರಸ್ತಿ

ತೀರ ನಾದುರಸ್ತಿಯಲ್ಲಿರುವ ಅಪಾಯವುಂಟಾಗುವ ಸಾಧ್ಯತೆ ಇರುವ ಶಾಲಾ ಕಟ್ಟಡಗಳನ್ನು ಪರಿಶೀಲಿಸಿ ದುರಸ್ತಿಗಾಗಿ ಜಿ. ಪಂ.ಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸ ಲಾಯಿತು. ಶಾಲಾ ವಠಾರವನ್ನು ಶುಚಿತ್ವದಿಂದ ಇರಿಸಿಕೊಂಡು ನೆರೆಪೀಡಿತ ಪ್ರದೇಶಗಳು, ಸಂತ್ರಸ್ತರ ತಾತ್ಕಾಲಿಕ ವಸತಿ ಹಾಗೂ ಗಂಜಿಕೇಂದ್ರ ನಿರ್ಮಿಸಲು ಶಾಲಾ ಕಟ್ಟಡಗಳನ್ನು ಒದಗಿಸಲು ಹಾಗೂ ತುರ್ತು ಸಂದರ್ಭದಲ್ಲಿ ಶಾಲಾ ಶಿಕ್ಷಕರನ್ನು ನೆರೆ ಪರಿಹಾರ ಕಾರ್ಯಕ್ಕೆ ಬಳಸಿಕೊಳ್ಳಲು ಸೂಚಿಸಲಾಯಿತು.

ಗಂಜಿ ಕೇಂದ್ರದಲ್ಲಿ ಸಂತ್ರಸ್ತರಿಗೆ ಊಟದ ವ್ಯವಸ್ಥೆ

ಬಗ್ಗೆ ಸಹಾಯಕ ನಿರ್ದೇಶಕರು, ಅಕ್ಷರ ದಾಸೋಹ, ಸಂಬಂಧಪಟ್ಟ ಶಾಲಾ ಮುಖ್ಯೋಪಾಧ್ಯಾಯರಿಗೆ ಸೂಚನೆ ನೀಡಲಾಗಿದೆ. ಶಾಲೆಗಳು ಪ್ರಾರಂಭವಾದ ಅನಂತರ ಪ್ರತಿದಿನ ಪ್ರಾರ್ಥನೆ ಮುಗಿದ ಅನಂತರ ಪ್ರಾಕೃತಿಕ ವಿಕೋಪದ ಬಗ್ಗೆ ತಿಳಿವಳಿಕೆ ನೀಡಲು ಶಿಕ್ಷಣ ಇಲಾಖೆಗೆ ಸೂಚಿಸಲಾಯಿತು.

ನದಿ ಉಪನದಿ ಹರಿಯುವ ಪ್ರದೇಶಗಳಲ್ಲಿ ನಿಗಾ ವಹಿಸುವುದು ಹಾಗೂ ನದಿಪಾತ್ರದಲ್ಲಿ ವಾಸಿಸುವ ಗ್ರಾಮಸ್ಥರ ಬಗ್ಗೆ ತೀವ್ರ ನಿಗಾವಹಿಸಬೇಕು. ಮುಂಜಾಗ್ರತೆಯಾಗಿ ನೀರಿನ ಒಳಹರಿವು ಹಾಗೂ ಹೊರ ಹರಿವಿನ ಮಟ್ಟದ ಮಾಹಿತಿಯನ್ನು ನೀರಾವರಿ ಇಲಾಖೆಯವರು ನೀಡುವಂತೆ ತಿಳಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next