Advertisement

ಆ.23ರಿಂದ 25ರ ವರೆಗೆ ಮೂರು ದಿನಗಳ ಕಾಲ ಮಳೆ? ಯೆಲ್ಲೋ ಅಲರ್ಟ್‌ ಘೋಷಣೆ

08:45 PM Aug 20, 2022 | Team Udayavani |

ಬೆಂಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಆ.23ರಿಂದ 25ರ ವರೆಗೆ ಮೂರು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಿದೆ.

Advertisement

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಗುಡುಗು ಸಹಿತ ಮಳೆಯಾಗುವ ಲಕ್ಷಣಗಳಿವೆ ಎಂದು ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next