Advertisement

ಕರಾವಳಿಯಲ್ಲಿ ಚುರುಕುಗೊಂಡ ಮುಂಗಾರು; ದ.ಕ. ಜಿಲ್ಲೆಯಾದ್ಯಂತ ಉತ್ತಮ ಮಳೆ

07:53 PM Aug 28, 2021 | Team Udayavani |

ಮಂಗಳೂರು : ಅರಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದಿಂದ ರಾಜ್ಯ ಕರಾವಳಿ ಭಾಗದಲ್ಲಿ ಮುಂಗಾರು ಚುರುಕುಗೊಂಡಿದ್ದು, ಶನಿವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಉತ್ತಮ ಮಳೆಯಾದ ವರದಿಯಾಗಿದೆ.

Advertisement

ಮಂಗಳೂರು ನಗರದಲ್ಲಿ ಬೆಳಗ್ಗಿನಿಂದ ಬಿಟ್ಟು ಬಿಟ್ಟು ಮಳೆಯಾಗಿದೆ. ಪುತ್ತೂರು, ಉಪ್ಪಿನಂಗಡಿ, ಕಡಬ, ಬೆಳ್ತಂಗಡಿ, ಮಡಂತ್ಯಾರು, ಧರ್ಮಸ್ಥಳ, ನಾರಾವಿ, ಪೂಂಜಾಲಕಟ್ಟೆ, ಬಂಟ್ವಾಳ, ಬಿ.ಸಿ. ರೋಡು, ಕಲ್ಲಡ್ಕ, ಸುಳ್ಯ, ಸುಬ್ರಹ್ಮಣ್ಯ, ಗುತ್ತಿಗಾರು, ವಿಟ್ಲ, ಕನ್ಯಾನ, ಸುರತ್ಕಲ್‌, ಮೂಡುಬಿದಿರೆ, ಉಳ್ಳಾಲ ಸೇರಿದಂತೆ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ.

ದ.ಕ. ಜಿಲ್ಲೆಯ ಸುಳ್ಯದಲ್ಲಿ ಗರಿಷ್ಠ 52 ಮಿ. ಮೀ. ಮಳೆ ದಾಖಲಾಗಿದೆ. ಬೆಳ್ತಂಗಡಿ 34.4 ಮಿ.ಮೀ., ಬಂಟ್ವಾಳ 40 ಮಿ.ಮೀ., ಮಂಗಳೂರು 36.2 ಮಿ.ಮೀ., ಪುತ್ತೂರು 41.1 ಮಿ.ಮೀ., ಮೂಡುಬಿದಿರೆ 41.2 ಮಿ.ಮೀ, ಕಡಬ 48.6 ಮಿ.ಮೀ. ಮಳೆಯಾಗಿದ್ದು, ದಿನದ ಸರಾಸರಿ 41.9 ಮಿ.ಮೀ. ಮಳೆ ದಾಖಲಾಗಿದೆ. ಉಪ್ಪಿನಂಗಡಿ ನೇತ್ರಾವತಿ ಮತ್ತು ಕುಮಾರಧಾರ ನದಿ 25 ಮೀ. ಹಾಗೂ ಬಂಟ್ವಾಳ ನೇತ್ರಾವತಿ ನದಿ 3.4 ಮೀಟರ್‌ನಲ್ಲಿ ಹರಿಯುತ್ತಿದೆ.

ಇದನ್ನೂ ಓದಿ :ಉಡುಪಿ ಶ್ರೀಕೃಷ್ಣಾಷ್ಟಮಿಯಂದು ಭಕ್ತರಿಗೆ ದರ್ಶನಾವಕಾಶ : ಭರದಿಂದ ನಡೆಯುತ್ತಿದೆ ತಯಾರಿ

ಆರೆಂಜ್‌ ಅಲರ್ಟ್‌
ಕರಾವಳಿ ಭಾಗದಲ್ಲಿ ಆ.29 ಬೆಳಗ್ಗೆ 8.30ರಿಂದ ಆ.30ರ ಬೆಳಗ್ಗೆ 8.30ರವರೆಗೆ “ಆರೆಂಜ್‌ ಅಲರ್ಟ್‌’ ಘೊಷಿಸಲಾಗಿದೆ. ಈ ವೇಳೆ 115.6 ಮಿ.ಮೀ.ನಿಂದ 204.4 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಭಾರೀ ಮಳೆ-ಗಾಳಿ ಇರಲಿದ್ದು, ಕಡಲಿನ ಅಬ್ಬರ ಹೆಚ್ಚಿರುವ ಸಾಧ್ಯತೆ ಇದೆ. ಬಂಗಾಲಕೊಲ್ಲಿಯಲ್ಲಿ ಸದ್ಯದಲ್ಲಿಯೇ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next