Advertisement

ಜಿಲ್ಲಾದ್ಯಂತ ಜಿಟಿಜಿಟಿ ಮಳೆ

04:07 PM Jul 10, 2020 | Suhan S |

ಗದಗ: ಅವಳಿ ನಗರ ಸೇರಿದಂತೆ ಜಿಲ್ಲಾದ್ಯಂತ ಗುರುವಾರ ದಿನವಿಡೀ ಜಿಟಿಜಿಟಿ ಮಳೆಯಾಗಿದೆ. ಜಿಲ್ಲೆಯ ನಗರ ಗದಗ-ಬೆಟಗೇರಿ, ನರಗುಂದ, ರೋಣ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲೂ ಉತ್ತಮ ಮಳೆಯಾಗಿದೆ.

Advertisement

ಎರಡು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅವಳಿ ನಗರ ಸೇರಿಂದತೆ ಗ್ರಾಮೀಣ ಭಾಗದ ರಸ್ತೆಗಳು ಅಕ್ಷರಶಃ ಕೆಸರು ಗದ್ದೆಯಾಗಿವೆ. ಅವಳಿ ನಗರದ ಬಹುತೇಕ ರಸ್ತೆಗಳಲ್ಲಿ ಬೃಹತ್‌ ಕಂದಕಗಳು ತಲೆ ಎತ್ತಿವೆ. ದೊಡ್ಡ ಗುಂಡಿಗಳು ಬಾಯೆ¤ರೆದಿವೆ. ನಿರಂತರ ಮಳೆಯಿಂದ ತಗ್ಗು ಗುಂಡಿಯಲ್ಲಿ ನೀರು ನಿಂತಿದ್ದು, ವಾಹನ ಸವಾರರು ಬೈಕ್‌ ಸವಾರರು ಸಾಹಸ ಪಡುವಂತಾಯಿತು.

ಈ ಬಾರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಅಬ್ಬರಿಸಿದ್ದ ಮಳೆ ಆ ನಂತರ ಮಾಯವಾಗಿತ್ತು. ಹೆಸರು, ಶೇಂಗಾ, ಈರುಳ್ಳಿ,ಮೆಣಸಿನಕಾಯಿ, ಸೂರ್ಯಕಾಂತಿ ಸೇರಿದಂತೆ ಇನ್ನಿತರೆ ಬೆಳೆಗಳನ್ನು ಬಿತ್ತನೆ ಮಾಡಿದ್ದ ರೈತರು, ಮಳೆಗಾಗಿ ಆಕಾಶದತ್ತ ನೋಡುವಂತಾಗಿತ್ತು. ಆದರೆ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದ ರೈತ ಸಮುದಾಯದಲ್ಲಿ ಹರ್ಷ ಮೂಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next