Advertisement

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

05:14 PM May 03, 2024 | Team Udayavani |

ಹುಣಸೂರು: ಬಿಸಿಲಿನ ಬೇಗೆಯಿಂದ ಬಳಲುತ್ತಿದ್ದ ಹುಣಸೂರಿನ ಜನತೆಗೆ ಮಳೆರಾಯ ತಂಪೆರೆದಿದ್ದಾನೆ, ತಾಲೂಕಿನಾದ್ಯಂತ ಶುಕ್ರವಾರ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಿದ್ದು ಧಿಡೀರ್ ಸುರಿದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.

Advertisement

ಸಂಜೆ ಸುಮಾರು 4.30 ರ ವೇಳೆಗೆ ಒಮ್ಮಿಂದೊಮ್ಮೆಗೆ ಮೋಡ ಕವಿದು ಬಿರುಗಾಳಿ ಜೊತೆಗೆ ಆಲಿಕಲ್ಲು ಮಳೆಯಾಗಿದೆ, ಒಂದೆಡೆ ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಜನತೆ ಕೊಂಚ ನಿಟ್ಟುಸಿರು ಬಿಟ್ಟಂತಾಗಿದೆ, ಅಲ್ಲದೆ ತಮ್ಮ ತಮ್ಮ ಕೆಲಸಗಳಿಗಾಗಿ ಮನೆಯಿಂದ ಹೊರಬಂದಿದ್ದ ಜನ ಮಳೆಯಿಂದ ಪರದಾಡುವಂತಾಯಿತು.

ಮಳೆ ಇಲ್ಲದೆ ಕಂಗಾಲಾಗಿದ್ದ ರೈತರು ಇಂದು ಸುರಿದ ಮೊದಲ ಮಳೆಯಿಂದ ಹರ್ಷಚಕಿತರಾಗಿದ್ದರೆ.

ಇದನ್ನೂ ಓದಿ: Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Advertisement

Udayavani is now on Telegram. Click here to join our channel and stay updated with the latest news.

Next