Advertisement

ಹಲವು ದಿನಗಳ ಬಳಿಕ ಕರಾವಳಿಯಾದ್ಯಂತ ಬಿಡುವು ನೀಡಿದ ಮಳೆ, 2 ದಿನ ಆರೆಂಜ್‌ ಅಲರ್ಟ್‌

01:18 AM Jul 13, 2022 | Team Udayavani |

ಮಂಗಳೂರು/ಉಡುಪಿ: ಕರಾವಳಿಯಾದ್ಯಂತ ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಭಾರೀ ಮಳೆ ಮಂಗಳವಾರ ತುಸು ಬಿಡುವು ನೀಡಿದೆ.

Advertisement

ಮಂಗಳೂರು ನಗರದಲ್ಲಿ ಮಂಗಳವಾರ ದಿನವಿಡೀ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಸಂಜೆ ಮತ್ತು ರಾತ್ರಿ ವೇಳೆ ಉತ್ತಮ ಮಳೆಯಾಗಿದೆ. ಬೆಳ್ತಂಗಡಿ ಬಳಿ ರಾಷ್ಟ್ರೀಯ ಹೆದ್ದಾರಿ ಕಾಶಿಬೆಟ್ಟು ಬಳಿ ಮೋರಿ ಕುಸಿತ ಉಂಟಾಗಿದೆ. ಜಿಲ್ಲೆಯ ಮಂಗಳೂರು, ಸುರತ್ಕಲ್‌, ಮೂಡುಬಿದಿರೆ, ಪುತ್ತೂರು, ಉಪ್ಪಿನಂಗಡಿ, ಕಡಬ, ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಗುರುವಾಯನಕೆರೆ, ಮಡಂತ್ಯಾರು ಸೇರಿದಂತೆ ಹಲವು ಕಡೆಗಳಲ್ಲಿ ಮಳೆ ಯಾದ ವರದಿಯಾಗಿದೆ.

ಉಡುಪಿ, ಮಣಿಪಾಲ ಮೊದ ಲಾದೆಡೆ ಆಗಾಗ ಸಾಧಾರಣ ಮಳೆ ಯಾಗಿದೆ. ಹೆಚ್ಚಿನ ಸಮಯ ಬಿಸಿಲು, ಮೋಡದ ವಾತಾವರಣ ಇತ್ತು.

2 ದಿನ ಆರೆಂಜ್‌ ಅಲರ್ಟ್‌
ಕರಾವಳಿ ಭಾಗದಲ್ಲಿ ಮತ್ತೆ ಮಳೆ ಬಿರುಸು ಪಡೆಯುವ ನಿರೀಕ್ಷೆ ಇದ್ದು, ಜು. 13 ಮತ್ತು 14ರಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಈ ವೇಳೆ ಬಿರುಸಿನ ಮಳೆ, ಗಾಳಿ ಮತ್ತು ಸಮುದ್ರದ ಅಬ್ಬರ ಹೆಚ್ಚಿರುವ ನಿರೀಕ್ಷೆ ಇದೆ. ಜು. 15ರಿಂದ 17ರ ವರೆಗೆ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next