Advertisement

ಕೇರಳದಲ್ಲಿ ಮಳೆ; ರೆಡ್‌ ಅಲರ್ಟ್‌

07:35 AM Jul 30, 2020 | mahesh |

ತಿರುವನಂತಪುರ: ಕೇರಳಾದ್ಯಂತ ಬುಧವಾರ ಭಾರೀ ಮಳೆಯಾ ಗಿದ್ದು, ಇಡುಕ್ಕಿ ಜಿಲ್ಲೆಯಲ್ಲಿ ಶುಕ್ರವಾರದವರೆಗೂ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. 24 ಗಂಟೆಗಳಲ್ಲಿ 20.5 ಸೆ.ಮೀ.ನಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಕೊಟ್ಟಯಂ, ಎರ್ನಾಕುಳಂ, ತೃಶ್ಶೂರ್‌ ಮತ್ತು ಪಾಲಕ್ಕಾಡ್‌ ಜಿಲ್ಲೆಗಳಿಗೆ ಆರೆಂಟ್‌ ಅಲರ್ಟ್‌ ಘೋಷಿಸಲಾಗಿದ್ದು, ಇಲ್ಲೂ ಧಾರಾಕಾರ ಮಳೆಯಾಗಲಿದೆ. ಅಲ್ಲದೆ, ಭೂಕುಸಿತ, ಪ್ರವಾಹ ಸೇರಿದಂತೆ ಇತರೆ ನೈಸರ್ಗಿಕ ವಿಕೋಪಗಳು ಉಂಟಾಗುವ ಸಾಧ್ಯತೆ ಅಧಿಕವಾಗಿದೆ ಎಂಬ ಎಚ್ಚರಿಕೆ ಯನ್ನೂ ನೀಡಲಾಗಿದ್ದು, ಸಾರ್ವಜನಿಕರು ಜಾಗೃತರಾಗಿರುವಂತೆ ಸೂಚಿಸಲಾಗಿದೆ.

ಇದೇ ವೇಳೆ, ಮಹಾರಾಷ್ಟ್ರದ ಮುಂಬಯಿ, ಥಾಣೆ, ರಾಯಗಢ‌, ಪಾಲ^ರ್‌ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬುಧವಾರ ಭಾರೀ ಮಳೆಯಾ ಗಿದ್ದು, ತಗ್ಗುಪ್ರದೇಶಗಳೆಲ್ಲ ಜಲಾವೃತವಾಗಿವೆ.

ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಪ್ರವಾಹ ಪ್ರಕೋಪಕ್ಕೆ ಮತ್ತೆ ಮೂವರು ಬಲಿಯಾಗಿ ದ್ದಾರೆ. ಹೀಗಾಗಿ, ಅಲ್ಲಿ ಅಸುನೀಗಿದವರ ಸಂಖ್ಯೆ 133ಕ್ಕೆ ಏರಿಕೆಯಾಗಿದೆ. ಒಟ್ಟು 16.55 ಲಕ್ಷ ಮಂದಿಗೆ ತೊಂದರೆಯಾಗಿದೆ. ಪಶ್ಚಿಮ ಬಂಗಾಲದಲ್ಲಿ ಶುಕ್ರವಾರದ ವರೆಗೆ ಗುಡುಗು ಸಹಿತ ಧಾರಾಕಾರ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next