Advertisement

ಸುಬ್ರಹ್ಮಣ್ಯ ಪರಿಸರದ ಅಲ್ಲಲ್ಲಿ ಮಳೆ

04:49 PM May 07, 2019 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ರವಿವಾರ ಮಳೆಯಾಗಿದೆ.

Advertisement

ಸುಬ್ರಹ್ಮಣ್ಯ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಾದ ಗುತ್ತಿಗಾರು, ಕೈಕಂಬ, ಪಂಜ, ಬೆಳ್ಳಾರೆ ಸೇರಿದಂತೆ ಮತ್ತಿತರ ಪ್ರದೇಶಗಳಲ್ಲಿ ಸಂಜೆ ವೇಳೆಗೆ ತುಂತುರು ಮಳೆಯಾಗಿದೆ.

ಕರಾವಳಿ ಪ್ರದೇಶದಲ್ಲಿ ದಿನದಿಂದ ದಿನಕ್ಕೆ ಸೆಕೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ 35 ಡಿ.ಸೆ. ಗರಿಷ್ಠ ಉಷ್ಣಾಂಶ ಮತ್ತು 25 ಡಿ.ಸೆ. ಕನಿಷ್ಠ ಉಷ್ಣಾಂಶ ದಾಖಲಾಗಿತ್ತು. ಕರಾವಳಿ ಪ್ರದೇಶದಲ್ಲಿ ಸಾಮಾನ್ಯವಾಗಿ ಗರಿಷ್ಠ ಉಷ್ಣಾಂಶ ಹೆಚ್ಚಾಗುತ್ತಿದ್ದು, ಇದರ ಪರಿಣಾಮ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಮುಂದಿನೆರಡು ದಿನ ಕರಾವಳಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮೊನ್ನೆಯಷ್ಟೇ ಮೂರನೇ ಸೂಪರ್‌ಮೂನ್‌ ಕಾಣಿಸಿಕೊಂಡಿದ್ದು, ಇದರ ಪರಿಣಾಮ ಕಳೆದ ಕೆಲ ದಿನಗಳಿಂದ ಪಣಂಬೂರು ಮತ್ತು ತಣ್ಣೀರುಬಾವಿ ಬೀಚ್‌ಗಳಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next