Advertisement

ರಾಜಧಾನಿಯಲ್ಲಿ ಮಳೆ

12:54 AM Aug 17, 2019 | Team Udayavani |

ಬೆಂಗಳೂರು: ರಾಜಧಾನಿಯ ಹಲವೆಡೆ ಶುಕ್ರವಾರ ರಾತ್ರಿ ಮಳೆ ಸುರಿದಿದೆ. ಲಾಲ್‌ಬಾಗ್‌, ಬಸವನಗುಡಿ, ಬೆಂಗಳೂರು ಪೂರ್ವ ಹಾಗೂ ದಕ್ಷಿಣ ವಿಭಾಗಗಳ ಹಲವು ಕಡೆ ಮಳೆ ಸುರಿದ ಪರಿಣಾಮ ರಸ್ತೆ ಗುಂಡಿಗಳಲ್ಲಿ ನೀರು ನಿಂತಿತ್ತು.

Advertisement

ಪರಿಣಾಮ ವಾಹನ ಸವಾರರು ಪರದಾಡುಂತಾಯಿತು. ದಿಢೀರ್‌ ಮಳೆ ಸುರಿದ ಹಿನ್ನೆಲೆಯಲ್ಲಿ ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ಟ್ರಾಫಿಕ್‌ ಜಾಮ್‌ ಕೂಡ ಉಂಟಾಗಿತ್ತು. ಮಳೆ ಸ್ಥಗಿತಗೊಂಡ ಬಳಿಕ ಪರಿಸ್ಥಿತಿ ತಿಳಿಯಾಯಿತು. ಮರ ಉರುಳಿರುವುದು ಸೇರಿ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next