Advertisement

ದ.ಕ., ಉಡುಪಿ ಮಳೆ ತಗ್ಗಿದರೂ ಅನಾಹುತ ತಗ್ಗಿಲ್ಲ

10:25 AM Aug 19, 2018 | |

ಮಂಗಳೂರು/ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಶನಿವಾರ ಮಳೆ ಇಳಿಮುಖವಾಗಿದೆ. ಆದರೆ ದ.ಕ.ದ ಕೆಲವು ತಗ್ಗು ಪ್ರದೇಶಗಳಲ್ಲಿ ನೆರೆ ನಿಂತಿದ್ದು, ಕೆಲವೆಡೆ ಗುಡ್ಡ ಕುಸಿತ ಸಂಭವಿಸಿದೆ. ಮಂಗಳೂರು ನಗರದಲ್ಲಿ ಬೆಳಗ್ಗಿನಿಂದ ಸಂಜೆಯವರೆಗೆ ಬಿಸಿಲು ಮತ್ತು ಮೋಡ ಕವಿದ ವಾತಾವರಣವಿತ್ತು. ರಾತ್ರಿ ವೇಳೆ ಮಳೆ ಪ್ರಾರಂಭವಾಗಿದೆ. ವೇಣೂರು, ಸುಳ್ಯ, ಪುಂಜಾಲಕಟ್ಟೆ, ಪುತ್ತೂರು, ಉಪ್ಪಿನಂಗಡಿ, ಬಂಟ್ವಾಳ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸೇರಿದಂತೆ ಮತ್ತಿತರ ಪ್ರದೇಶಗಳಲ್ಲಿ ಮಳೆಯಾದ ವರದಿಯಾಗಿದೆ.

Advertisement

ಉಡುಪಿ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಶನಿವಾರ ಸಂಜೆ ವೇಳೆಗೆ ಉತ್ತಮ ಮಳೆಯಾಯಿತು. ಕಾರ್ಕಳ ಪರಿಸರದಲ್ಲಿಯೂ ಸಂಜೆ ಸಾಧಾರಣ ಪ್ರಮಾಣದ ಮಳೆಯಾಗಿದೆ. ತೆಕ್ಕಟ್ಟೆ, ಬ್ರಹ್ಮಾವರ ಪರಿಸರದಲ್ಲಿಯೂ ಸಾಧಾರಣ ಮಳೆಯಾಗಿದೆ.ಹೆಚ್ಚುವರಿ 50 ಲಕ್ಷ ರೂ. ಅನುದಾನ: ಪ್ರಾಕೃತಿಕ ವಿಕೋಪ ನಿರ್ವಹಣೆಗೆಂದು ದ.ಕ. ಜಿಲ್ಲೆಯ ತಾಲೂಕುಗಳಿಗೆ ತಲಾ 50 ಲ.ರೂ. ಅನುದಾನವನ್ನು ಹೆಚ್ಚುವರಿ ಯಾಗಿ ಜಿಲ್ಲಾಧಿಕಾರಿ ಶನಿವಾರ ಬಿಡುಗಡೆ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next