Advertisement

ಯಾದಗಿರಿಯ ರೈತರ ಮೊಗದಲ್ಲಿ ಸಂತಸ ತಂದ ಮಳೆ

04:48 PM Jun 26, 2020 | keerthan |

ಯಾದಗಿರಿ: ಜಿಲ್ಲೆಯಲ್ಲಿ ಗುರುವಾರ ರಾತ್ರಿ ಉತ್ತಮ ಮಳೆ ಸುರಿದಿದ್ದು ರೈತಾಪಿ ವರ್ಗದಲ್ಲಿ ಸಂತೋಷ ಮೂಡಿಸಿದೆ.

Advertisement

ಜಿಲ್ಲೆಯಲ್ಲಿ ರೈತರು ಮುಂಗಾರು ಬಿತ್ತನೆ ಮಾಡಿದ್ದು, ಬೀಜ ಮೊಳಕೆಯೊಡೆದಿರುವ ಸಂದರ್ಭದಲ್ಲಿ ಮಳೆ ಸುರಿದಿರುವುದು ಮೊಳಕೆ ಬೇಳವಣಿಗೆಗೆ ಜೀವ ತುಂಬಿ ಸಾಕಷ್ಟು ಸಹಕಾರಿಯಾಗಲಿದೆ.

ಶಹಾಪುರ ವ್ಯಾಪ್ತಿಯಲ್ಲಿ ಅತಿ ಹೆಚ್ಚು 74 ಮಿ.ಮೀ, ಸುರಪುರ ವ್ಯಾಪ್ತಿಯಲ್ಲಿ 42 ಮಿ.ಮೀ, ಹುಣಸಗಿ 50 ಮಿ.ಮೀ ಮತ್ತು ವಡಗೇರಾ 14 ಮಿ.ಮೀ ಮಳೆಯಾಗಿದ್ದರೆ ಗುರುಮಠಕಲ್ ಹಾಗೂ ಯಾದಗಿರಿ ತಾಲೂಕು ವ್ಯಾಪ್ತಿಯಲ್ಲಿ ಅತಿ ಕಡಿಮೆ ತಲಾ 1 ಮಿ.ಮೀ ಮಳೆಯಾಗಿರುವ ಕುರಿತು ವರದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next