Advertisement

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆ ಸಾಧ್ಯತೆ

08:40 PM Mar 18, 2023 | Team Udayavani |

ಬೆಂಗಳೂರು: ಕರಾವಳಿ, ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ 2 ದಿನಗಳ ಕಾಲ ಗುಡುಗು ಸಹಿತ ಮಹಿಳೆಯಾಗುವ ಸಾಧ್ಯತೆಗಳಿದ್ದು, ಇದರ ಜತೆಗೆ ಉಷ್ಣಾಂಶವೂ 3 ಡಿ.ಸೆ.ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ಕೊಟ್ಟಿದೆ.

Advertisement

ಕರಾವಳಿ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಾ.20ರ ವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಿಂಚು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ರಾತ್ರಿ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 3 ಡಿ.ಸೆ. ಹೆಚ್ಚಳವಾಗುವ ಸಾಧ್ಯತೆಗಳಿವೆ.

ಎಲ್ಲೆಲ್ಲಿ ಎಷ್ಟೆಷ್ಟು ಮಳೆ?
ಶನಿವಾರ ಉತ್ತರ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ. ಕರಾವಳಿಯಲ್ಲಿ ಒಣಹವೆ ಮುಂದುವರಿದಿದೆ. ಬೀದರ್‌ ಹಾಗೂ ಬೀದರ್‌ನ ನಿರ್ಣಾದಲ್ಲಿ ಅತೀ ಹೆಚ್ಚು 7 ಸೆಂ.ಮೀ ಮಳೆಯಾಗಿದೆ.

ಯಾದಗಿರಿಯ ಶಹಪುರದಲ್ಲಿ 6, ಬೀದರ್‌ ನಿಟ್ಟೂರಿನಲ್ಲಿ 5, ಬೀದರ್‌ನ ಮನ್ನಾಲಿ, ಮಂಠಾಳ, ಸಂತಪುರ, ಜನವಾಡ, ಹುಮನಾಬಾದ್‌, ಕಲಬುರಗಿಯ ಕಮಲಪುರದಲ್ಲಿ ತಲಾ 3 ಸೆಂ.ಮೀ, ಬೀದರ್‌ನ ಮುಡಬಿ, ಕೋಲಾರ‌, ಮಾಲೂರು, ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣ, ಎಂಪ್ರಿಯಲ್ಲಿ ತಲಾ 2, ಬೀದರ್‌ನ ರಾಜೇಶ್ವರ್‌, ಹಲಬುರ್ಗಾ, ಕಲಬುರಗಿಯ ಮುಧೋಳೆ, ಅಡಕಿ, ವಿಜಯಪುರದ ತಾಳಿಕೋಟೆ, ಬೆಂಗಳೂರಿನ ಗೋಪಾಲನಗರ, ಉತ್ತರಹಳ್ಳಿ, ಬೆಂಗಳೂರು ಗ್ರಾಮಾಂತರದ ಹೊಸಕೋಟೆ, ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಮಂಗಳೂರಿನಲ್ಲಿ 36.1 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ.

 

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next