Advertisement

Rain ಕರಾವಳಿಯಾದ್ಯಂತ ಸಾಧಾರಣ ಮಳೆ

12:22 AM Aug 07, 2024 | Team Udayavani |

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಮಂಗಳವಾರ ಸಾಧಾರಣ ಮಳೆಯಾಗಿದೆ. ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ಬೆಳಗ್ಗೆ ಬಿರುಸಿನ ಮಳೆಯಾಗಿತ್ತು. ಆ ಬಳಿಕ ಮಳೆಯ ತೀವ್ರತೆ ಕಡಿಮೆಯಾಗಿದೆ.

Advertisement

ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಹಲವೆಡೆ ಉತ್ತಮ ಮಳೆಯಾಗಿದ್ದು, ಕಾರ್ಕಳ, ಹೆಬ್ರಿ, ಕುಂದಾಪುರ, ಉಡುಪಿ, ಸುತ್ತಮುತ್ತ ಮೋಡ-ಬಿಸಿಲು ವಾತಾವರಣದ ನಡುವೆ ಬಿಟ್ಟುಬಿಟ್ಟು ಮಳೆಯಾಗಿದೆ.

ಸೋಮವಾರ ತಡರಾತ್ರಿ ಕೆಲವು ಕಡೆಗಳಲ್ಲಿ ಮಳೆಯಾಗಿದ್ದು, ಮಂಗಳವಾರ ಮುಂಜಾನೆ ಉಡುಪಿ, ಮಣಿಪಾಲ, ಮಲ್ಪೆ ಸುತ್ತಮುತ್ತ ಕೆಲಕಾಲ ನಿರಂತರ ಮಳೆಯಾಗಿದೆ. ಮಧ್ಯಾಹ್ನ ಅನಂತರ ಕೆಲಕಾಲ ಮಳೆ ಕ್ಷೀಣಗೊಂಡಿದ್ದು, ಬಿಸಿಲಿನ ವಾತಾವರಣದಿಂದ ಕೂಡಿತ್ತು. ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ರ ಹಿಂದಿನ 24 ಗಂಟೆಗಳ ಕಾಲ 17.7 ಮಿ. ಮೀ. ಸರಾಸರಿ ಮಳೆಯಾಗಿದೆ.

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಮುಂದಿನ ಎರಡು ದಿನ ಮಳೆ ತುಸು ಬಿಡುವು ನೀಡುವ ಸಾಧ್ಯತೆಯಿದೆ. ಮಂಗಳವಾರ ಮಂಗಳೂರಿನಲ್ಲಿ 25.2 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 3.5 ಡಿ.ಸೆ. ಕಡಿಮೆ ಮತ್ತು 24 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.7 ಡಿ.ಸೆ. ಏರಿಕೆ ಕಂಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next