Advertisement

Rain: ಮತ್ತೆ ಮಳೆ: ಅಣೆಕಟ್ಟುಗಳಿಗೆ ಭಾರೀ ನೀರು

01:54 AM Aug 26, 2024 | Team Udayavani |

ಹುಬ್ಬಳ್ಳಿ: ಉತ್ತರ ಕರ್ನಾಟಕ, ಮಲೆನಾಡು ಭಾಗದಲ್ಲಿ ಮತ್ತೆ ಮಳೆ ಆರಂಭವಾಗಿದ್ದು ಜಲಾಶಯಗಳಿಗೆ ಒಳ ಹರಿವು ಹೆಚ್ಚಾಗಿದೆ. ನದಿಗಳಿಗೆ ಹೆಚ್ಚಿನ ನೀರು ಬಿಡುತ್ತಿರುವುದರಿಂದ ತೀರ ಪ್ರದೇಶದ ಜನರಿಗೆ ಮತ್ತೆ ನಡುಕ ಆರಂಭವಾಗಿದೆ.

Advertisement

ಖಾನಾಪುರ ಹಾಗೂ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು ಮಲಪ್ರಭಾ ನದಿಗೆ 11,192 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಜಲಾಶಯ ಭರ್ತಿಯಾಗಿದ್ದರಿಂದ 9644 ಕ್ಯೂಸೆಕ್‌ ನೀರು ಹೊರ ಬಿಡುತ್ತಿದ್ದು ತೀರ ಪ್ರದೇಶದಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ. ಘಟಪ್ರಭಾ ಜಲಾಶಯಕ್ಕೆ 13,524 ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು 13,195 ಕ್ಯೂಸೆಕ್‌ ನೀರು ನದಿಗೆ ಬಿಡಲಾಗುತ್ತಿದೆ. ಮಲೆನಾಡಿನಲ್ಲಿ ಮಳೆ ಮುಂದುವರಿದಿದ್ದರಿಂದ ತುಂಗಭದ್ರಾ ನದಿಗೆ 23725 ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ಭರ್ತಿಗೆ ಇನ್ನು 19 ಟಿಎಂಸಿ ಮಾತ್ರ ಬಾಕಿ ಇದೆ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ, ಅಂಕೋಲಾದಲ್ಲೂ ಮಳೆ ಅಬ್ಬರಿಸುತ್ತಿದೆ. ಹೊನ್ನಾವರದಲ್ಲಿ ಮನೆ ಕುಸಿದಿದ್ದು, ವೃದ್ಧೆಯನ್ನು ರಕ್ಷಿಸಲಾಗಿದೆ. ಸೂಪಾ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದ್ದು 559 ಮೀಟರ್‌ ನೀರು ಸಂಗ್ರಹವಾಗಿದೆ. ಆಂಧ್ರದ ಅನಂತಪುರ ಜಿಲ್ಲೆಯಲ್ಲಿ ಸತತ ಮಳೆಗೆ ಬಳ್ಳಾರಿ ಜಿಲ್ಲೆಯ ಗಡಿ ಭಾಗದಲ್ಲಿ ನೆರೆ ಆವರಿಸಿದೆ.

ಉಡುಪಿ, ಉ. ಕ. ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ
ಬೆಂಗಳೂರು: ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೋಮವಾರ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಸೋಮವಾರ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಿದರೆ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ. ನಿರಂತರ ಗಾಳಿಯ ವೇಗ 30-40 ಕಿ.ಮೀ. ಇರಲಿವೆ.

Advertisement

Udayavani is now on Telegram. Click here to join our channel and stay updated with the latest news.

Next