Advertisement

Rain update: ಅಕಾಲಿಕ ಮಳೆಗೆ ನಾಲ್ವರು ಸಾವು

11:13 PM Apr 07, 2023 | Team Udayavani |

ಬಾದಾಮಿ/ಗದಗ: ಅಕಾಲಿಕ ಮಳೆ ರಾಜ್ಯಾದ್ಯಂತ ಭಾರೀ ಅವಾಂತರ ಸೃಷ್ಟಿಸಿದ್ದು, ನಾಲ್ವರು ಸಾವಿಗೀಡಾಗಿದ್ದಾರೆ. ಬಾದಾಮಿಯಲ್ಲಿ ಮನೆ ಛಾವಣಿ ಕುಸಿದು ಯಂಕುಬಾಯಿ (79), ಶಾರವ್ವ (58) ಮೃತಪಟ್ಟಿದ್ದಾರೆ. ಗದಗ ತಾಲೂಕಿನ‌ಲ್ಲಿ ಸಿಡಿಲು ಬಡಿದು ಲಿಂಗದಾಳ ಗ್ರಾಮದ ಶರಣಪ್ಪ ಪುರದ (21), ದೇವರಾಜ ಹನುಮಂತಪ್ಪ ಬಡಗಿ (18) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜತೆಗಿದ್ದ ಮತ್ತೂಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

Advertisement

ಕರಾವಳಿಯ ವಿವಿಧೆಡೆ ಉತ್ತಮ ಮಳೆ
ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೂಡ ಶುಕ್ರವಾರ ಧಾರಾಕಾರ ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನ ಕೆಲವೆಡೆ ಆಲಿಕಲ್ಲು ಮಳೆಯಾಗಿದೆ ಇದರಿಂದಾಗಿ ಬಾಳೆ ಸೇರಿದಂತೆ ಹಲವು ತೋಟಗಳಿಗೆ ಹಾನಿಯಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ, ಹೆಬ್ರಿ, ಸಿದ್ದಾಪುರ ಸಹಿತ ಹಲವು ಸ್ಥಳಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next