Advertisement

ಮುನ್ನೆಚ್ಚರಿಕೆ ದೃಷ್ಟಿಯಿಂದ ಮಳೆಕೊಯ್ಲು ವ್ಯವಸ್ಥೆ ಅಳವಡಿಕೆ

10:50 PM Sep 13, 2019 | mahesh |

ಅಭಿಯಾನದಿಂದ ಪ್ರೇರಣೆ

Advertisement

ನಗರದ ರಥಬೀದಿಯ ಸುನಿಲ್‌ ಪೈ ಅವರು ತಮ್ಮ ಮನೆಯಲ್ಲಿ ತಿಂಗಳ ಹಿಂದೆ ಮಳೆಕೊಯ್ಲು ವ್ಯವಸ್ಥೆಯನ್ನು ಅಳವಡಿಸಿದ್ದಾರೆ. ಕೆಲವು ದಿನಗಳಿಂದ ಉದಯವಾಣಿ ಸುದಿನದಲ್ಲಿ ಪ್ರಕಟವಾಗುತ್ತಿರುವ ಮನೆ ಮನೆಗೆ ಮಳೆಕೊಯ್ಲು ಅಭಿಯಾನದಿಂದ ಪ್ರೇರಣೆಗೊಂಡು ಈ ವ್ಯವಸ್ಥೆಯನ್ನು ಅಳವಡಿಸಿದ್ದಾರೆ.

ಸುನಿಲ್‌ ಪೈ ಅವರ ಮನೆಯಲ್ಲಿ ಈ ಹಿಂದೆ ನೀರಿನ ಸಮಸ್ಯೆ ತಲೆದೋರಿಲ್ಲ. ಆದರೆ ಮುಂಬರುವ ದಿನಗಳಲ್ಲಿ ಯಾವುದೇ ರೀತಿಯ ಸಮಸ್ಯೆ ಬರಬಾರದು ಎಂಬ ಉದ್ದೇಶಕ್ಕೆ ಮುನ್ನಚ್ಚರಿಕೆ ದೃಷ್ಟಿಯಿಂದ ಮಳೆಕೊಯ್ಲು ವ್ಯವಸ್ಥೆ ಅಳವಡಿಸಿದ್ದಾರೆ.

ಮಳೆ ನೀರನ್ನು ಪೋಲಾಗಲು ಬಿಡದೆ ಮನೆಯ ಮೇಲ್ಛಾವಣಿಯಿಂದ ಬಾವಿಗೆ ಪೈಪ್‌ ಮುಖೇನ ಸಂಪರ್ಕ ಕಲ್ಪಿಸಿದ್ದಾರೆ. ಬಾವಿ ಬಳಿ ಫಿಲ್ಟರ್‌ ಅಳವಡಿಸಿದ್ದು, ಇದರಿಂದಾಗಿ ಶುದ್ಧ ನೀರು ಬಾವಿಗೆ ಬೀಳುತ್ತಿದೆ.

15 ಅಡಿ ನೀರು ಹೆಚ್ಚಳ
ಮಠದಕಣಿಯಲ್ಲಿರುವ ಯೋಗೀಶ್‌ ಪೈ ಅವರ ನೂತನ ಮನೆಯ ಬಾವಿಗೆ ಮಳೆಕೊಯ್ಲು ವ್ಯವಸ್ಥೆ ಅಳವಡಿಸಲಾಗಿದ್ದು, ಬಾವಿಯಲ್ಲಿ ಸುಮಾರು 15 ಅಡಿಯಷ್ಟು ನೀರು ಮೇಲೆ ಬಂದಿರುವುದನ್ನು ಗಮನಿಸಿದ್ದಾರೆ.

Advertisement

“ಉದಯವಾಣಿ’ ಮನೆಮನೆಗೆ ಮಳೆಕೊಯ್ಲು ಅಭಿಯಾನದಿಂದ ಪ್ರೇರಣೆಗೊಂಡು, ಮಳೆಗಾಲದಲ್ಲಿ ವ್ಯರ್ಥವಾಗಿ ಹರಿದು ಹೋಗುವ ನೀರನ್ನು ಒಂದೆಡೆ ಹಿಡಿದಿಟ್ಟು ಶುದ್ಧೀಕರಣಗೊಳಿಸಿ ಬಾವಿಗೆ ಬೀಳುವಂತೆ ನೋಡಿಕೊಂಡಿದ್ದಾರೆ. ಮೊದಲೆಲ್ಲ ಬಾವಿಯಲ್ಲಿ ನೀರಿ ಅಷ್ಟೊಂದು ಇರಲಿಲ್ಲ. ಇದೀಗ ಮಳೆಕೊಯ್ಲು ವ್ಯವಸ್ಥೆ ಮಾಡಿಕೊಂಡ ಬಳಿಕ ನೀರಿನ ಮಟ್ಟ ತೀರಾ ಹೆಚ್ಚಳವಾಗಿದೆ ಎನ್ನುತ್ತಾರೆ ಯೋಗೀಶ್‌ ಪೈ ಅವರ ಸಹೋದರ ಸಂದೇಶ್‌ ಪೈ.

ನೀವೂ ಅಳವಡಿಸಿ, ವಾಟ್ಸಪ್‌ ಮಾಡಿ
ಉದಯವಾಣಿಯ ಅಭಿಯಾನದಿಂದ ಪ್ರೇರಣೆಗೊಂಡು ಕಾರ್ಯಾಗಾರದಲ್ಲಿ ಭಾಗವಹಿಸಿದವರು ಈಗ ಕಾರ್ಯೋನ್ಮುಖರಾಗಿ ಮಳೆ ನೀರು ಕೊಯ್ಲು ಪದ್ಧತಿಯನ್ನು ತಮ್ಮ ಮನೆ, ಸಂಘ- ಸಂಸ್ಥೆ, ಧಾರ್ಮಿಕ
ಕೇಂದ್ರಗಳಲ್ಲಿ ಅಳವಡಿಸುತ್ತಿದ್ದಾರೆ. “ಮನೆ ಮನೆಗೆ ಮಳೆಕೊಯ್ಲು’ ಅಭಿಯಾನದಿಂದ ಪ್ರೇರಿತರಾಗಿ ನೀವೂ ನಿಮ್ಮ ಮನೆ, ಮಳೆ ಕೊಯ್ಲು ಪದ್ಧತಿ ಅಳವಡಿಸಿಕೊಂಡಿದ್ದರೆ ಫೋಟೋ ಸಮೇತ ನಮಗೆ ವಿವರವನ್ನು ವಾಟ್ಸಪ್‌ ಮಾಡಿ. ಅವುಗಳನ್ನು ಪತ್ರಿಕೆಯಲ್ಲಿ ಪ್ರಕಟಿಸಿ ಮತ್ತಷ್ಟು ಜನರನ್ನು ಉತ್ತೇಜಿಸೋಣ. 9900567000

Advertisement

Udayavani is now on Telegram. Click here to join our channel and stay updated with the latest news.

Next