Advertisement

ಕಡಿಯಾಳಿ: ಮಳೆ ನೀರು ಕೊಯ್ಲು ಕಾರ್ಯಾಗಾರ

11:19 PM Sep 27, 2019 | Sriram |

ಉಡುಪಿ: ಮಳೆ ನೀರು ಕೊಯ್ಲು ಪ್ರತಿಯೊಬ್ಬನ ಜವಾಬ್ದಾರಿ ಎಂದು ತಿಳಿದು ಅಳವಡಿಸಿಕೊಂಡರೆ ಮುಂದಿನ ದಿನಗಳಲ್ಲಿ ನಗರದ ನೀರಿನ ಸಮಸ್ಯೆ ಪರಿಹಾರವಾಗಬಲ್ಲದು ಎಂದು ಮಂಗಳೂರು ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ| ಜಗದೀಶ ಬಾಳಾ ಹೇಳಿದರು.

Advertisement

ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಡಿಯಾಳಿ, ಕೆನರಾ ಕ್ರೆಡಿಟ್‌ ಕೋ -ಆಪರೇಟಿವ್‌ ಸೊಸೈಟಿ ನೇತೃತ್ವದಲ್ಲಿ ಕಡಿಯಾಳಿ ಕಾತ್ಯಾಯನೀ ಮಂಟಪದಲ್ಲಿ ನಡೆದ ಮಳೆ ನೀರು ಕೊಯ್ಲು ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಕೆನರಾ ಕ್ರೆಡಿಟ್‌ ಕೋ -ಆಪರೇಟಿವ್‌ ಸೊಸೈಟಿಯ ಅಧ್ಯಕ್ಷ ಯು.ಮೋಹನ ಉಪಾಧ್ಯ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ವಸಂತ ಭಟ್‌, ಕಾರ್ಯದರ್ಶಿ ಸತೀಶ್‌ ಕುಲಾಲ್‌, ಕೋಶಾಧಿಕಾರಿ ಎಂ.ವಲ್ಲಭ್‌ ಭಟ್‌ ಉಪಸ್ಥಿತರಿದ್ದರು. ಕ್ರೆಡಿಟ್‌ ಕೋ- ಆಪರೇಟಿವ್‌ ಸೊಸೈಟಿಯ ಕಾರ್ಯ ನಿರ್ವಹಣಾಧಿಕಾರಿ ವಾದಿರಾಜ ಭಟ್‌ ಸ್ವಾಗತಿಸಿದರು. ನಗರಸಭೆ ಸದಸ್ಯ ಗಿರೀಶ್‌ ಎಂ. ಅಂಚನ್‌ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಕೆ.ರಾಘವೇಂದ್ರ ಕಿಣಿ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next