Advertisement

ಎರಡು ದಿನ ಗುಡುಗು ಸಹಿತ ಮಳೆ ಸಾಧ್ಯತೆ

10:48 AM Apr 21, 2019 | Lakshmi GovindaRaju |

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಶನಿವಾರವೂ ಮಳೆ ಮುಂದುವರಿದಿದ್ದು, ಇನ್ನೂ ಎರಡು ದಿನ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement

ದಕ್ಷಿಣ ಒಳನಾಡಿನಲ್ಲಿ ಉಂಟಾಗಿರುವ ಕಡಿಮೆ ಒತ್ತಡದ ತಗ್ಗು (ಟ್ರಫ್) ಹಾಗೂ ಮೇಲ್ಮೆ„ ಸುಳಿಗಾಳಿಯ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಪ್ರಮುಖವಾಗಿ ತಮಿಳುನಾಡಿಗೆ ಹೊಂದಿಕೊಂಡಿರುವ ಆನೇಕಲ್‌, ರಾಮನಗರ, ಕೋಲಾರ, ಹಾಸನ, ಚಾಮರಾಜನಗರ, ಬೆಂಗಳೂರು, ಚಿಕ್ಕಬಳ್ಳಾಪುರ ಸೇರಿ ಹಲವು ಜಿಲ್ಲೆಗಳಲ್ಲಿ ಶನಿವಾರ ಉತ್ತಮ ಮಳೆಯಾಗಿದೆ. ಭಾನುವಾರವೂ ಈ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಶನಿವಾರ ಕೋಲಾರದಲ್ಲಿ 36 ಹಾಗೂ ಬೆಂಗಳೂರು ಗ್ರಾಮಾಂತರ 28.50 ಮಿ.ಮೀ. ಮಳೆಯಾಗಿದೆ. ಉಳಿದಂತೆ ರಾಮನಗರ 23.40, ಹಾಸನ 19, ಬೆಂಗಳೂರು ನಗರ 3, ಚಿಕ್ಕಬಳ್ಳಾಪುರ 9.50, ತುಮಕೂರು 3.30, ಚಾಮರಾಜನಗರ 15.50, ಬಾಗಲಕೋಟೆ 2, ವಿಜಯಪುರ 2, ಮಂಡ್ಯ 3.50, ಮೈಸೂರು 5, ಕೊಡಗು 5.50, ದಕ್ಷಿಣ ಕನ್ನಡ 4.50 ಮಿ.ಮೀ. ಮಳೆಯಾಗಿದೆ.

ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಹಲವೆಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next