Advertisement

ಮಳೆಹಾನಿ: ಕೇರಳಕ್ಕೆ 10 ಕೋಟಿ ನೆರವು

06:20 AM Aug 11, 2018 | |

ಬೆಂಗಳೂರು: ಭಾರೀ ಮಳೆ ಮತ್ತು ಪ್ರವಾಹದಿಂದ ಕಂಗೆಟ್ಟಿರುವ ನೆರೆಯ ರಾಜ್ಯ ಕೇರಳಕ್ಕೆ ಕರ್ನಾಟಕ ಸರ್ಕಾರ 10 ಕೋಟಿ ರೂ.ನೆರವು ನೀಡಿದೆ.

Advertisement

ಅಲ್ಲದೆ, ವ್ಯಾಪಕ ಮಳೆಯಿಂದಾಗಿ ಸೋಂಕು ಭೀತಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ 15ಕ್ಕೂ ಹೆಚ್ಚು ಸದಸ್ಯರನ್ನೊಳಗೊಂಡ ವೈದ್ಯರ ತಂಡವನ್ನೂ ಕೇರಳಕ್ಕೆ ಕಳುಹಿಸಲಾಗುತ್ತಿದೆ ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಮಳೆಯಿಂದ ತೊಂದರೆಗೊಳಗಾಗಿರುವ ನೆರೆಯ ರಾಜ್ಯಕ್ಕೆ ಮಾನವೀಯ ನೆಲೆಗಟ್ಟಿನ ಮೇಲೆ ನೆರವು ನೀಡಲಾಗುತ್ತಿದೆ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿದ ಬಳಿಕ
ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ 10 ಕೋಟಿ ರೂ.ನೆರವು ಒದಗಿಸಲಾಗುತ್ತಿದೆ. ಇದಲ್ಲದೆ, ಕೇರಳದಲ್ಲಿ ಸೋಂಕು ಭೀತಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ 15ಕ್ಕೂ ಹೆಚ್ಚು ಸದಸ್ಯರ ವೈದ್ಯಕೀಯ ತಂಡವನ್ನು ಕಳುಹಿಸಲಾಗುತ್ತಿದೆ.

ಮಳೆ ಕಡಿಮೆಯಾಗುವವರೆಗೆ ಈ ತಂಡ ಕೇರಳದಲ್ಲಿದ್ದು, ಅಲ್ಲಿನ ಜನರಿಗೆ ವೈದ್ಯಕೀಯ ಸೇವೆ ಸೇರಿದಂತೆ ವಿವಿಧ ನೆರವು ನೀಡಲಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next