Advertisement

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಸಾಧ್ಯತೆ

12:40 AM Feb 11, 2019 | Team Udayavani |

ಬೆಂಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಸೋಮವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ತಮಿಳುನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ನಿರ್ಮಾಣ ವಾಗಿರುವ ವಾಯುಭಾರ ಕುಸಿತ ಮುಂದುವರಿದಿದ್ದು, ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ. ಮಂಗಳವಾರ ದಿಂದ ರಾಜ್ಯಾದ್ಯಂತ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

‘ಟ್ರಫ್’ ಪರಿಣಾಮದಿಂದಾಗಿ ಭಾನುವಾರವೂ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವಡೆ ಮಳೆಯಾಗಿದ್ದು, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಮೈಸೂರು, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಹಾಸನ, ಚಾಮರಾಜ ನಗರ, ಬಳ್ಳಾರಿ ಸೇರಿ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ. ಸೋಮವಾರವೂ ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ. ಭಾನುವಾರ ಸಂಜೆ 7.30ಕ್ಕೆ ದಾಖಲಾದ ಮಾಹಿತಿಯಂತೆ ಬೆಂಗಳೂರು ಗ್ರಾಮಾಂತರ ಹಾಗೂ ಹಾಸನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಒಟ್ಟು 45.5 ಮಿ. ಮೀ. ಮಳೆಯಾಗಿ ರುವುದು ದಾಖಲಾಗಿದೆ. ಉಳಿದಂತೆ ಚಿತ್ರದುರ್ಗ 40.1, ಮೈಸೂರು 42.5, ಚಿಕ್ಕಬಳ್ಳಾಪುರ 38.5, ತುಮಕೂರು 25, ಬೆಂಗಳೂರು ನಗರ 24, ಕೊಡಗು 23, ದಾವಣಗೆರೆ 21.3, ರಾಮನಗರ 11.4, , ಬಳ್ಳಾರಿ 4.6, ಬೆಳಗಾವಿ 4.5 ಹಾಗೂ ಬೀದರ್‌ ಜಿಲ್ಲೆಯಲ್ಲಿ 2 ಮಿ.ಮೀ ಮಳೆಯಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ಮಾಹಿತಿ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next