Advertisement

ಉ.ಭಾರತದಲ್ಲಿ ಪ್ರವಾಹ: 13 ಸಾವು

09:00 AM Sep 25, 2018 | Team Udayavani |

ಹೊಸದಿಲ್ಲಿ: ಹಿಮಾಚಲ ಪ್ರದೇಶ, ಹರ್ಯಾಣ, ಜಮ್ಮು ಕಾಶ್ಮೀರದಲ್ಲಿ ಭಾರೀ ಮಳೆ, ದಿಢೀರ್‌ ಪ್ರವಾಹ ಉಂಟಾಗಿದ್ದು, ನದಿಗಳೆಲ್ಲ ಅಪಾಯದ ಮಟ್ಟ ಮೀರಿ ಹರಿಯತೊಡಗಿವೆ. ಮಳೆ ಸಂಬಂಧಿ ಘಟನೆಗಳಿಂದ 13 ಮಂದಿ ಸಾವಿಗೀಡಾಗಿದ್ದು, ಅಪಾರ ಹಾನಿಯಾಗಿದೆ. ಪಕ್ಕದ ಪಂಜಾಬ್‌ನಲ್ಲೂ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇಲ್ಲಿನ ಪರಿಸ್ಥಿತಿಯು ಇತ್ತೀಚೆಗೆ ಪ್ರವಾಹದಿಂದ ನಲುಗಿದ ಕೇರಳ ಹಾಗೂ ಕರ್ನಾಟಕದ ಕೊಡಗನ್ನು ನೆನಪಿಸಿದೆ.

Advertisement

ಧಾರಾಕಾರ ಮಳೆಯಿಂದ ಭೂಕುಸಿತ ಉಂಟಾಗಿದ್ದು, ಬದ್ರಿನಾಥ, ಕೇದಾರನಾಥ, ಯಮುನೋತ್ರಿಯಂಥ ಯಾತ್ರಾಸ್ಥಳಗಳಿಗೆ ಹೋಗುವ ದಾರಿಗಳೆಲ್ಲ ಮುಚ್ಚಲ್ಪಟ್ಟಿವೆ. ಹಿಮಾಚಲದಲ್ಲಿ ದಿಢೀರ್‌ ಪ್ರವಾಹದಿಂದ ಹಲವು ಮನೆಗಳು ಕೊಚ್ಚಿಹೋಗಿವೆ. ಕುಲ್ಲುವಿನಲ್ಲಿ ಸಿಲುಕಿಕೊಂಡಿದ್ದ 21 ಮಂದಿಯನ್ನು ವಾಯುಪಡೆ ರಕ್ಷಿಸಿದೆ. ಜಮ್ಮು – ಕಾಶ್ಮೀರದಲ್ಲಿ ಭೂಕುಸಿತದಿಂದಾಗಿ ಒಂದೇ ಕುಟುಂಬದ ಐವರು ಸಾವಿಗೀಡಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next