Advertisement

ಸಂತಸ ಮೂಡಿಸಿದ ಮಳೆ

09:26 AM May 11, 2020 | Suhan S |

ಗದಗ: ಒಂದು ವಾರದಿಂದ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಸುರಿಯುತ್ತಿದೆ. ಅವಳಿ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಆಗಾಗ ಮಳೆಯಾಗುತ್ತಿದ್ದು, ರೈತರು ಹಾಗೂ ಸಾರ್ವಜನಿಕರಲ್ಲಿ ಸಂತಸ ತಂದಿದೆ.

Advertisement

ರವಿವಾರ ಬೆಳಗ್ಗೆಯಿಂದಲೇ ಅವಳಿ ನಗರದಲ್ಲಿ ಮೋಡ ಕವಿದ ವಾತಾವರಣವಿತ್ತು. ಸಂಜೆ 4 ಗಂಟೆ ಸುಮಾರಿಗೆ ಆರಂಭಗೊಂಡ ಮಳೆ ಅರ್ಧ ಗಂಟೆಗೂ ಹೆಚ್ಚು ಕಾಲ ಬಿರುಸಿನಿಂದ ಸುರಿಯಿತು. ಇದರಿಂದಾಗಿ ಹಳೇ ಡಿಸಿ ಆಫೀಸ್‌ ಸರ್ಕಲ್‌, ಗಾಂಧಿ ವೃತ್ತ ಹಾಗೂ ತೋಂಟದಾರ್ಯ ಮಠದ ಹೆಬ್ಟಾಗಿಲು ಬಳಿ ಎರಡು ಅಡಿ ಎತ್ತರದಷ್ಟು ನೀರು ಹರಿಯಿತು. ಮಳೆ ನೀರಿನಿಂದಾಗಿ ಚರಂಡಿಗಳು ತುಂಬಿ ಹರಿದವು. ಇಲ್ಲಿನ ಹೊಂಬಳ ನಾಕಾ, ಜನತಾ ಕಾಲೋನಿ ಸೇರಿದಂತೆ ಅವಳಿ ನಗರದ ವಿವಿಧೆಡೆ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ಮಳೆ ನೀರು ನುಗ್ಗಿದ್ದರಿಂದ ಭಾರೀ ಅವಾಂತರ ಸೃಷ್ಟಿಯಾಗಿತ್ತು. ಬಿರುಗಾಳಿ ಸಹಿತ ಸುರಿದ ಮಳೆಗೆ ಅಲ್ಲಲ್ಲಿ ಮರಗಳು ವಿದ್ಯುತ್‌ ತಂತಿಗಳ ಮೇಲೆ ಒರಗಿದ್ದರಿಂದ ನಗರದಲ್ಲಿ ಕೆಲಕಾಲ ವಿದ್ಯುತ್‌ ಸಂಪರ್ಕ ಕಡಿತಗೊಂಡಿತ್ತು.

ಬಳಿಕ ಸ್ಥಳಕ್ಕೆ ಧಾವಿಸಿದ ಹೆಸ್ಕಾಂ ಸಿಬ್ಬಂದಿ, ಮರಗಳನ್ನು ತೆರವುಗೊಳಿಸಿ, ವಿದ್ಯುತ್‌ ಪೂರೈಕೆಗೆ ಅನುವು ಮಾಡಿಕೊಟ್ಟರು. ತಾಲೂಕಿನ ಹರ್ಲಾಪುರ, ತಿಮ್ಮಾಪುರ, ಮುಂಡರಗಿ ತಾಲೂಕಿನ ಮೇವುಂಡಿ, ಶಿಂಗಟಾಲೂರ ಕೆರೆ ಭಾಗದಲ್ಲಿ ಆಲಿಕಲ್ಲಿ ಮಳೆ ಸುರಿದಿದೆ. ನರಗುಂದ ಭಾಗದಲ್ಲೂ ಸಾಧಾರಣ ಮಳೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next