ಈ ಸಂಬಂಧ ರಾಜ್ಯ ಸರ್ಕಾರ ಮತ್ತು ದಸ್ಸಾಲ್ಟ್ ಸಿಸ್ಟಮ್ಸ್ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಗುರುವಾರ ಐಟಿ-ಬಿಟಿ ಸಚಿವ ಪ್ರಿಯಾಂಕ ಖರ್ಗೆ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು.
Advertisement
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಹಭಾಗಿತ್ವದಲ್ಲಿ ಈ ಸೆಂಟರ್ ಆಫ್ ಎಕ್Õಲೆನ್ಸ್ ಸ್ಥಾಪಿಸಲಾಗುತ್ತಿದ್ದು, ಪ್ರತಿ ವರ್ಷ ಸುಮಾರು 1,600 ಇಂಜಿನಿಯರ್ಗಳಿಗೆ ಉನ್ನತ ಮಟ್ಟದ ತರಬೇತಿ ಹಾಗೂ ಕೌಶಲಾಭಿವೃದ್ಧಿ ಕಲ್ಪಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ಯೋಜನೆಗೆ ಒಟ್ಟು 288.68 ಕೋಟಿ ರೂ. ವೆಚ್ಚವಾಗಲಿದ್ದು, ಇದರಲ್ಲಿ ಮೂರು ವರ್ಷಗಳ ಅವಧಿಗೆ ರಾಜ್ಯ ಸರ್ಕಾರ ತನ್ನ ಪಾಲಾಗಿ 33.46 ಕೋಟಿ ರೂ.ನೀಡುತ್ತಿದೆ.
Related Articles
ಮೂರನೇ ಬೃಹತ್ ವೈಮಾನಿಕ ವಲಯವಾಗಿ ರೂಪುಗೊಳ್ಳಲಿದೆ. ಮುಂದಿನ ಹತ್ತು ವರ್ಷಗಳಲ್ಲಿ ಈ ಕ್ಷೇತ್ರದಲ್ಲಿ ಸುಮಾರು 22.5 ಕೋಟಿ ಅಮೆರಿಕನ್ ಡಾಲರ್ ಹರಿದು ಬರಲಿದೆ ಎಂದು ಹೇಳಿದರು. ವಾಯುಯಾನ ಮತ್ತು ರಕ್ಷಣಾ
ಪಡೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೃತ್ತಿಪರರಿಗೆ ತರಬೇತಿ ನೀಡಲು ಫ್ರಾನ್ಸ್ನ ತುಲೂಸ್ನ ಇನ್ಸ್ಟಿಟ್ಯೂಟ್ ಆಫ್ ಏರೋ ನಾಟಿಕ್ ಎಟ್ಸ್ಟೇಷಿಯಲ್ ಸಂಸ್ಥೆ ಯೊಂದಿಗೂ ಸರ್ಕಾರ ಒಪ್ಪಂದ ಮಾಡಿ ಕೊಂಡಿದೆ ಎಂದರು. ದಸ್ಪಾಲ್ಟ್
ಸಿಸ್ಟಮ್ಸ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಸ್ಯಾಮ್ಸನ್ ಖಾವ್, ಐಟಿ-ಬಿಟಿ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ವಿ.ಮಂಜುಳಾ, ಐಟಿ-ಬಿಟಿ ಇಲಾಖೆ ನಿರ್ದೇಶಕಿ ಡಾ. ಮಂಜುಳಾ ಉಪಸ್ಥಿತರಿದ್ದರು.
Advertisement